ಕಾರ್ಗಿಲ್ ಹುತಾತ್ಮರ ದಿನ (ವಿಜಯ್ ದಿವಾಸ್) 💪🙏

#ಕಾರ್ಗಿಲ್_ಕದನ #ವಿಜಯ_ದಿವಸ_ಜುಲೈ_26

ಒಂದು ಕಡೆ #ವಿಜಯದ ಸಂಭ್ರಮ... ಇನ್ನೊಂದು ಕಡೆ ಹುತಾತ್ಮ ಯೋಧರ ನೆನಪು 😔😔😔😔

ಕರ ಮುಗಿದು ನಿನಲ್ಲಿ ಬೇಡುವುದಿಷ್ಟೇ ದೇವಾ!
ನಿವಾರಿಸು ಈ ತ್ಯಾಗಿಗಳ ಮನೆಯವರ ನೋವಾ
ಮತೆ ಆರ೦ಭವಾಗದಿರಲಿ ಈ ಬೇಡದ ಕದನ
ವೀರಯೋಧರೇ – ಇದೋ ನಿಮಗೆ ನಮ್ಮೆಲ್ಲರ ನಮನ..🙏🏼🙏🏼

ಒಂದು ಕಡೆ ಗುಂಡಿನ ಸುರಿಮಳೆ..... ಇನ್ನೊಂದು ಕಡೆ ಕಡಿದಾದ ಆಯ ಕಟ್ಟಿನ ಸ್ಥಳ...... ಮತ್ತೊಂದು ಕಡೆ ಮೈ ಕೊರೆವ ಚಳಿ........! ಮಗದೊಂದು ಕಡೆ ರಕ್ತದ ಮಡುವಿನಲ್ಲಿ ಬಿದ್ದ ರಾಶಿ ರಾಶಿ ಹೆಣಗಳು...... ಅಬ್ಬಾ !! ಎಂಥಹ ಭಯಾನಕ ಸನ್ನಿವೇಶ...!!!
ಹೌದು, ಇದು ಕಾರ್ಗಿಲ್ ಯುದ್ದದ ರಣರಂಗದ ಚಿತ್ರಣ. ಪವಿತ್ರ ಸ್ಥಳವನ್ನು ಅಪವಿತ್ರ ಮಾಡಲು ಹೊರಟ ಪಾತಕಿಗಳ ಹುಟ್ಟಡಗಿಸಿ ಇಂದಿಗೆ ಬರೋಬ್ಬರಿ 19 ವರ್ಷಗಳು ಸಂದಿವೆ.

ಅಂದು ಜುಲೈ 26, 1999 ರಲ್ಲಿ ವೈರಿ ರಾಷ್ಟ್ರ, ಪಾಪಿ ಪಾಕಿಸ್ಥಾನವನ್ನು ಹೆಡೆಮುರಿ ಕಟ್ಟಿ ಬಗ್ಗು ಬಡಿದು ಕಾರ್ಗಿಲ್ ಯುದ್ಧವನ್ನು ಗೆದ್ದಂತಹ ದಿನ ಆ ದಿನವನ್ನು ಭಾರತೀಯರಾದ ನಾವು ಜುಲೈ 26 ರಂದು “ಕಾರ್ಗಿಲ್ ವಿಜಯೋತ್ಸವ ದಿನ”ವೆಂದು ಆಚರಿಸುತ್ತೇವೆ. ಇಂದಿಗೆ ಆ ವಿಜಯದ ಸವಿನೆನಪಿನ 19 ವರ್ಷಗಳು ಕಳೆದಿವೆ. ಆದರೆ ಆ ಗೆಲುವಿನ ಯಶೋಗಾಥೆಯ ಖುಷಿಯ ಹಿಂದೆ ಸಾವಿರಾರು ವೀರಯೋಧರ ನೋವಿದೆ, ಸಂಕಷ್ಟದ ಕರಾಳ ನೆನಪುಗಳಿವೆ, ಮರಣ ಕಾವ್ಯವಿದೆ. ನಮ್ಮ ಈ ನೆಮ್ಮದಿಯ ಸಂತೋಷದ ಜೀವನ ನಿಮ್ಮಯ ತ್ಯಾಗ ಬಲಿದಾನದ ಭಿಕ್ಷೆ. ನಿಮಗೆ ನಮ್ಮ ಕೋಟಿ ಕೋಟಿ ಪ್ರಣಾಮಗಳು.

ಬನ್ನಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರಯೋಧರ ನೆನೆಯೋಣ, ಶ್ರದ್ಧಾಂಜಲಿಯನ್ನು ಸಲ್ಲಿಸಿ ವೀರಗಾಥೆಯನ್ನು ಯುವಜನರಿಗೆ ತಿಳಿ ಹೇಳಿ ಸ್ಮರಿಸೋಣ. ಈ ಹೋರಾಟವು ಪಾಕಿಸ್ಥಾನದ ವಿರುದ್ಧ ನಾಲ್ಕನೇ ನೇರ, ಸಶಸ್ತ್ರ ಸಂಘರ್ಷವಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್‌ನೊಳಗೆ ನುಸುಳಿದವರು ನಮ್ಮ ಸೈನಿಕರಲ್ಲ ಎನ್ನುತ್ತಲೇ ಇದ್ದ ಪಾಕಿಸ್ಥಾನವು, ಸದ್ದಿಲ್ಲದೆ ಭಾರತದ ಗಡಿಯೊಳಕ್ಕೆ ಉಗ್ರಗಾಮಿಗಳ ಸೋಗಿನಲ್ಲಿ ಒಳಗೆ ನುಗ್ಗಿತ್ತು.

1999ರ ಫೆಬ್ರವರಿ ತಿಂಗಳಲ್ಲಿ ಅಂದಿನ ಪ್ರಧಾನಿ #ಅಟಲ್_ಬಿಹಾರಿ_ವಾಜಪೇಯಿ ಅವರು ಐತಿಹಾಸಿಕ ಲಾಹೋರ್ ಬಸ್ ಯಾತ್ರೆಯ ಮೂಲಕ ಪಾಕಿಸ್ಥಾನಕ್ಕೆ ತೆರಳಿ, ಅಲ್ಲಿನ ಪ್ರಧಾನಿ ನವಾಜ್ ಶರೀಫ್ ಅವರಿಗೆ ಭಾರತಕ್ಕೆ ಆಹ್ವಾನ ನೀಡಿದ್ದರಲ್ಲದೆ, ಲಾಹೋರ್ ಘೋಷಣೆಗೆ ಸಹಿ ಹಾಕಿದ್ದರು. ಕಾಶ್ಮೀರ ಬಿಕ್ಕಟ್ಟಿಗೆ ಶಾಂತಿಯುತವಾದ ದ್ವಿಪಕ್ಷೀಯ ಪರಿಹಾರ ಕಂಡುಕೊಳ್ಳುವ ಘೋಷಣೆಯಾಗಿತ್ತದು.

ಆದರೆ, ಅವರು ಭಾರತಕ್ಕೆ ವಾಪಸ್ ಬಂದಿದ್ದೇ ತಡ, ಬೆನ್ನಿಗೇ ಚೂರಿ ಇರಿದ ಪಾಕಿಸ್ಥಾನವು, ಗಡಿ ನಿಯಂತ್ರಣ ರೇಖೆಯೊಳಗೆ ತನ್ನ ಸೈನಿಕರನ್ನು ನುಗ್ಗಿಸಿತು. ಮಾಮೂಲಿ ಗುಂಡಿನ ಚಕಮಕಿ, ಉಗ್ರರ ಒಳನುಸುಳುವಿಕೆ ಎಂದು ಅರಿತಿದ್ದ ಭಾರತೀಯ ಸೇನೆಗೆ, ಕೊನೆಗೆ ಇದು ಪಾಕಿಸ್ಥಾನ ಸೇನೆಯ ಅತಿಕ್ರಮಣ ಎಂದು ಅರಿವಾದಾಗ, ಪೂರ್ಣ ಪ್ರಮಾಣದಲ್ಲಿ ಸೈನಿಕರು ದೇಶರಕ್ಷಣೆಗೆ ನಿಂತರು. ಇದೆಲ್ಲ ದುಸ್ಸಾಹಸದ ಹಿಂದಿದ್ದದ್ದು ಅಂದಿನ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಪರ್ವೇಜ್ ಮುಷರ್ರಫ್ ಎಂಬ ಧೂರ್ತ. ಆತ 1998ರ ಅಕ್ಟೋಬರ್ ತಿಂಗಳಲ್ಲಿ ಪಾಕ್ ಸೇನೆಯ ನೊಗವನ್ನು ತನ್ನ ಕೈಗೆ ತೆಗೆದುಕೊಂಡಂದಿನಿಂದ ಭಾರತದ ಮೇಲೆ ಆಕ್ರಮಣಕ್ಕೆ ಯೋಜನೆ ರೂಪಿಸುತ್ತಲೇ ಇದ್ದ. “ಆಪರೇಶನ್ ಬದ್ರ್” ಎಂಬ ದುಸ್ಸಾಹಸಕ್ಕೆ ಕೈಹಚ್ಚಿದ ಪಾಕಿಸ್ಥಾನವು ಕಾಶ್ಮೀರ ಕಣಿವೆಯಿಂದ ಲಡಾಖ್ ಅನ್ನು ಬೇರ್ಪಡಿಸಿ, ಸಿಯಾಚಿನ್ ಗ್ಲೇಷಿಯರ್ ಅನ್ನು ವಶಪಡಿಸಿಕೊಳ್ಳುವ ಯೋಜನೆ ರೂಪಿಸಿತು.

ಕಾಶ್ಮೀರದಲ್ಲಿ ಆಗ ಮೈ ಗಡ್ಡೆಕಟ್ಟುವಷ್ಟು ಚಳಿಯ ಸಮಯ. ಸುಮಾರು ಮೈನಸ್ 48 ಡಿಗ್ರಿವರೆಗೂ ಒಮ್ಮೊಮ್ಮೆ ಶೈತ್ಯವು ತಲುಪುತ್ತದೆ. 1971ರ ಶಿಮ್ಲಾ ಒಪ್ಪಂದದ ಅನುಸಾರ, ಉಭಯ ರಾಷ್ಟ್ರಗಳೂ ಗಡಿ ನಿಯಂತ್ರಣ ರೇಖೆಯ ಗುಂಟ, ಮಾನವೀಯ ನೆಲೆಯಲ್ಲಿ ಸೇನೆಯನ್ನು ಹಿಂತೆಗೆದುಕೊಳ್ಳುವುದು ಸಂಪ್ರದಾಯ. ಆದರೆ, ಇದನ್ನೇ ಭಾರತದ ಒಳಗೆ ನುಗ್ಗಲು ಅವಕಾಶವಾಗಿ ಮಾಡಿಕೊಂಡ ಪಾಕಿಸ್ಥಾನವು, ವಿಪರೀತ ಪರಿಸ್ಥಿತಿಯ ದುರ್ಲಾಭ ಪಡೆದು ಉಗ್ರರನ್ನೂ, ಸೈನಿಕರನ್ನೂ ಕಾರ್ಗಿಲ್ ವಲಯದ 160 ಕಿ.ಮೀ. ಗಡಿ ನಿಯಂತ್ರಣ ರೇಖೆಯೆಲ್ಲೆಡೆ ಒಳಗೆ ತಳ್ಳಿತು.

ಗನ್ನುಗಳು, ಗ್ರೆನೇಡುಗಳು, ವಿಮಾನವನ್ನೂ ಹೊಡೆದುರುಳಿಸಬಲ್ಲ ಅತ್ಯಾಧುನಿಕ ಆಯುಧಗಳಿಂದೊಡಗೂಡಿದ ಪಾಕಿ ಸೈನಿಕರು ಒಳ ನುಗ್ಗುತ್ತಿರುವುದು ಭಾರತೀಯ ಸೇನೆಯ ಗಮನಕ್ಕೆ ಬಂದಾಕ್ಷಣ, ವಾಜಪೇಯಿ ಸರಕಾರವು ‘ಆಪರೇಶನ್ ವಿಜಯ್’ ಕಾರ್ಯಾಚರಣೆ ಆರಂಭಿಸಿಯೇ ಬಿಟ್ಟಿತು. ಪಾಕ್ ಅತಿಕ್ರಮಿಸಿಕೊಂಡಿರುವ ಪ್ರತಿಯೊಂದು ಇಂಚು ನೆಲವನ್ನೂ ವಾಪಸ್ ಪಡೆದುಕೊಳ್ಳುವಂತೆ ವಾಜಪೇಯಿ ಆದೇಶಿಸಿದರು.

1999ರ ಜೂನ್ 7 ರಂದು ವಾಜಪೇಯಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಐತಿಹಾಸಿಕ ಭಾಷಣ – “ನಮ್ಮ ಸೇನಾಪಡೆಗಳ ಮೇಲೆ ನನಗೆ ಪೂರ್ತಿ ವಿಶ್ವಾಸವಿದೆ. ನಮ್ಮ ಸೈನಿಕರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ, ಬೇರೆ ಯಾರು ಕೂಡ ಮುಂದೆಂದಿಗೂ ಇಂತಹಾ ದುಸ್ಸಾಹಸಕ್ಕೆ ಇಳಿಯದಂತೆ ಮಾಡುತ್ತಾರೆ”. ಇದರಿಂದ ಪ್ರೇರಿತರಾದ ಸೈನಿಕರು ಪಾಕಿಸ್ಥಾನಿ ಸೇನೆಯು ಕುಯ್ಯೋ… ಮುರ್ಯೋ,… ಎಂದು ಕೂಗಾಡುತ್ತಾ, ದಯವಿಟ್ಟು ಭಾರತದ ಪ್ರಹಾರವನ್ನು ನಿಲ್ಲಿಸಿ ಎಂದು ಅಮೆರಿಕ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಕಾಲು ಹಿಡಿಯುವಲ್ಲಿವರೆಗೆ ತಲುಪಿತ್ತು.

20 ಸಾವಿರ ಮಂದಿ ಭೂಸೇನಾ ಪಡೆ ಯೋಧರು, 10 ಸಾವಿರ ಮಂದಿ ವಾಯು ಸೇನೆ, ಪ್ಯಾರಾ ಮಿಲಿಟರಿ ಪಡೆಯವರು ಗಡಿಯಲ್ಲಿ ಟೊಂಕ ಕಟ್ಟಿದರು. ಮೈನಸ್ 15 ಡಿಗ್ರಿ ಕೊರೆಯುವ ಚಳಿಯಲ್ಲಿ, ಸಮುದ್ರ ಮಟ್ಟಕ್ಕಿಂತ 16 ಸಾವಿರ ಅಡಿ ಎತ್ತರದ ಯುದ್ಧ ಭೂಮಿಯಲ್ಲಿ ಭಾರತೀಯ ಸೈನಿಕರು ಮೆರೆದಾಡಿದರು. ಶತ್ರುಗಳ ರುಂಡ ಚೆಂಡಾಡಿದರು. ವಾಯುಸೇನೆಯು ಭೂಸೇನಾ ಪಡೆಗಳಿಗೆ “ಆಪರೇಶನ್ ಸಫೇದ್ ಸಾಗರ್” ಮೂಲಕ ಬೆಂಬಲ ನೀಡುತ್ತಾ, ಉಗ್ರರು ಮತ್ತು ಪಾಕ್ ಸೈನಿಕರತ್ತ ಬಾಂಬ್ ಸುರಿಮಳೆಗರೆಯುತ್ತಿದ್ದರೆ, ಸೈನಿಕರು ಕೆಳಗೆ ವೀರಾವೇಶದಿಂದ ಹೋರಾಡಿದರು. ಈ ಯುದ್ಧದ ವಿಶೇಷತೆಯೆಂದರೆ, ಭಾರತವು ತನ್ನ ನೆಲದಲ್ಲೇ ಹೋರಾಡಿತೇ ಹೊರತು, ಎಂದಿಗೂ ಗಡಿ ನಿಯಂತ್ರಣ ರೇಖೆ ದಾಟಿ ಹೋಗಲಿಲ್ಲ. ಅಂತಾರಾಷ್ಟ್ರೀಯ ಒಪ್ಪಂದಕ್ಕೆ ಮಾನ್ಯತೆ ನೀಡಿತ್ತು ಅದು. ಈ ಮೂಲಕ ಪಾಕಿಸ್ಥಾನದ ಮೇಲೆ ರಾಜತಾಂತ್ರಿಕ ಹೋರಾಟದಲ್ಲಿ ಮೇಲುಗೈ ಪಡೆಯಲು ಕೂಡ ಭಾರತಕ್ಕೆ ಸಾಧ್ಯವಾಯಿತು. ಪಾಕಿಸ್ಥಾನವು ಸೋತು ಸುಣ್ಣವಾಯಿತು. ತಲೆ ತಗ್ಗಿಸಿತು. ಭಾರತದ ಒತ್ತಡ ತಾಳಲಾರದೆ ನವಾಜ್ ಶರೀಫ್ ಅವರಂತೂ ವಾಷಿಂಗ್ಟನ್‌ಗೆ ಧಾವಿಸಿ ಬಿಲ್ ಕ್ಲಿಂಟನ್ ಕಾಲು ಹಿಡಿಯುವುದು ಬಾಕಿ – ದಯವಿಟ್ಟು ಹೇಗಾದರೂ ಮಾಡಿ ಯುದ್ಧ ನಿಲ್ಲಿಸಿ ಅಂತ ಗೋಗರೆಯಬೇಕಾಯಿತು.

‌1999ರ ಜುಲೈ 4 ರಂದು ಕ್ಲಿಂಟನ್-ಶರೀಫ್ ಭೇಟಿಯಾದಾಗ, ಕ್ಲಿಂಟನ್ ಅಂತೂ ಪಾಕಿಗೆ ಬೆನ್ನು ಹಾಕಿಬಿಟ್ಟರು. ಪಾಕ್ ಸೈನಿಕರನ್ನು ಮೊದಲು ಭಾರತೀಯ ಭಾಗದಿಂದ ವಾಪಸ್ ಕರೆಸಿಕೊಳ್ಳಿ ಅಂತ ಸೂಚಿಸಿದಾಗ, ಶರೀಫ್ ಹತಾಶರಾಗಿದ್ದರು. ಯಾಕೆಂದರೆ, ಎಲ್ಲವೂ ಮುಷರಫ್ ಕೈಯಲ್ಲಿತ್ತು. ಅಷ್ಟು ಹೊತ್ತಿಗೆ ಅದಾಗಲೇ ಭಾರತದ ವೀರ ಯೋಧರು ಶೇ. 80 ರಷ್ಟು ಭಾಗವನ್ನೂ ಮರಳಿ ಪಡೆದಿದ್ದರು. ಕೊನೆಯಲ್ಲಿ ಜುಲೈ 26 ರಂದು ಕಾರ್ಗಿಲ್‌ನ ಕೊನೆಯ ಠಾಣೆಯನ್ನು ಭಾರತೀಯ ಸೇನೆ ವಶಪಡಿಸಿಕೊಂಡು ಗೆಲುವು ಘೋಷಿಸಿತು. ಅದುವೇ ಕಾರ್ಗಿಲ್ ವಿಜಯ ದಿವಸ. ಭಾರತವು ಯುದ್ಧದಲ್ಲಿ ಗೆಲುವು ಸಾಧಿಸಿ ತನ್ನ ಸೇನಾ ತಾಕತ್ತು ತೋರಿಸಿತಾದರೂ, ಅದಾಗಲೇ ತನ್ನ 527 ಮಂದಿ ವೀರಪುತ್ರರನ್ನು ಕಳೆದುಕೊಂಡಿತ್ತು.

ಈ ದಿನ ಈ ಹುತಾತ್ಮ ವೀರರನ್ನು ಸ್ಮರಿಸೋಣ. ಅವರ ತ್ಯಾಗ ಬಲಿದಾನಗಳು ವ್ಯರ್ಥವಾಗದಂತೆ ಕಾಪಾಡಿಕೊಳುತ್ತಾ ಭಾರತವನ್ನು ಮತ್ತೆ ಸದೃಢ, ಸಶಕ್ತ ಸ್ವಚ್ಛ, ರಾಷ್ಟ್ರವನ್ನಾಗಿಸೋಣ. ತಾಯಿ ಭಾರತಿಯನ್ನು ವಿಶ್ವಮಾತೆ, ಜಗದ್ಗುರುವನ್ನಾಗಿಸೋಣ..🙏🏼🙏🏼

# ಅಮರ್ ರಹೇ 😔🙏

ಜೈ ಹಿಂದ್ 🇮🇳


Comments

Popular posts from this blog

ಸ್ವಾತಂತ್ರ್ಯ_ಯಾರಿಂದ_ಬಂತು... ಲಾಲಾ_ಲಜಪತ್_ರಾಯ್ 🙏🙏

ಕಾರ್ಗಿಲ್ ವೀರ ಯೋಧರ ನೆನಪು 🙏😍🇮🇳

ಸ್ವಾತಂತ್ರ್ಯ_ಯಾರಿಂದ_ಬಂತು.. #ರಾಜಗುರು 🙏🙏