Posts

Showing posts from August, 2019

ಸ್ವಾತಂತ್ರ್ಯ_ಯಾರಿಂದ_ಬಂತು.. #ಮಂಗಳ್_ಪಾಂಡೆ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಮಂಗಳ್_ಪಾಂಡೆ (ದಿ. ೮ ಎಪ್ರಿಲ್ ೧೮೫೭) ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮ ಎಂದೇ ಪ್ರಖ್ಯಾತರು. ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು. ೧೯೫೭ಲ್ಲಿ ಬ್ರಿಟಿಷರ ಮೇಲೆ ಮಾಡಿದ ಆಕ್ರಮಣವು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ರೂಪವನ್ನು ಪಡೆಯಿತು.ಅವರು ವ್ಯಾಪಕವಾಗಿ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರರು ಎಂದು ಕರೆಯಲಾಗುತ್ತದೆ. ಭಾರತ ಸರ್ಕಾರ ವಿಶಿಷ್ಠ ಸ್ವಾತಂತ್ರ್ಯ ಹೋರಾಟಗಾರ ಎಂದು ಸ್ಮರಣೆಗಾಗಿ ಭಾರತೀಯ ಅಂಚೆ ಚೀಟಿಯ ಜಾರಿ ಮಾಡಿದೆ. ಮೀರಿದ ಅವರ ಜೀವನ ಮತ್ತು ಕ್ರಿಯೆಗಳನ್ನು ಬೆಳ್ಳಿ ತೆರೆಗೆ ಮಾರ್ಪಡಿಸಲಾಗಿದೆ. ಮಂಗಲ ಪಾಂಡೆ - ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಆರಂಭಿಕ ವರ್ಷಗಳಲ್ಲಿ ಮಂಗಲ್ ಪಾಂಡೆ ಒಂದು ಭೂಮಿಹಾರ್ ಬ್ರಾಹ್ಮಣ ಕುಟುಂಬಕ್ಕೆ ಭಾರತದ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ, ನಾಗವ ಹಳ್ಳಿಯಲ್ಲಿ ಜುಲೈ ೧೮೨೭ ೧೯ ರಂದು ಜನಿಸಿದರು. ಅವರ ತಂದೆ, ದಿವಾಕರ್ ಪಾಂಡೆ, ವೃತ್ತಿಯ ಮೂಲಕ ರೈತ ಮತ್ತು ಮಧ್ಯಮ ವರ್ಗ ಸೇರಿದ್ದರು. ಮಂಗಲ್ ಪಾಂಡೆ, ನಂತರ ೧೮೩೦ ರಲ್ಲಿ ಬರಗಾಲದಿಂದ ಅವರ ತಂದೆ ಮಂಗಲ್ ಪಾಂಡೆ ಹಾಗೂ ಅವರ ಸಹೋದರಿಯನ್ನು ಬಿಟ್ಟು ಮೃತಪಟ್ಟರು. ಅವರು ೨೨ನೇ ವಯಸ್ಸಿನಲ್ಲಿ ೧೮೪೯ ರಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೇರಿದರು. ಪಾಂಡೆ ೩೪ ನೇ ಬಂಗಾಳ ಸ್ಥಳೀಯ ಪದಾತಿದಳದ ೬ ನೇ ಕಂಪನಿ ಭಾಗವಾಗಿದ್ದರು , ಪ್ರಮುಖವಾಗಿ ರೆಜಿಮೆಂಟ್ ತಂದೆಯ...

ಸ್ವಾತಂತ್ರ್ಯ_ಯಾರಿಂದ_ಬಂತು... ಚಂದ್ರಶೇಖರ್ ಆಜಾದ್ 🙏🙏

Image
#ಸುಮ್ಮನೆ_ಬರಲಿಲ್ಲ_ಸ್ವಾತಂತ್ರ್ಯ ವಾರಣಾಸಿಯ ಬೀದಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತಚಲನ ನಡೆದಿತ್ತು. ಹನ್ನೆರಡನೆ ವಯಸ್ಸಿಗಾಗಲೇ ಭಾರತ ಮಾತೆಯನ್ನು ಸ್ವತಂತ್ರ್ಯಗೊಳಿಸಬೇಕೆಂಬ ಹಂಬಲದಲ್ಲಿದ್ದ ಹುಡುಗನೊಬ್ಬ ಚಳುವಳಿಗಾರರ ಆಗಮನವನ್ನು ದೂರದಿಂದಲೇ ನೋಡುತ್ತ, ಕಾತರನಾಗಿ ಕಾಯುತ್ತಿದ್ದ. ಆ ಗುಂಪು ಹತ್ತಿರ ಬರುತ್ತಿದ್ದಂತೆ ತಾನೂ ಅವರಲ್ಲೊಂದಾಗಿ ನಡೆದ. “ಬೋಲೋ ಭಾರತ್ ಮಾತಾ ಕೀ?.. ಜೈ!" “ವಂದೇ... ಮಾತರಂ!" ಹದಿನೈದಿಪ್ಪತ್ತು ಹೆಜ್ಜೆ ಸರಿದಿರಬೇಕು? ಪೋಲಿಸರ ದಂಡು ಎದುರಾಯಿತು. ಘೋಷಣೆಗಳನ್ನು ಕೂಗುತ್ತ ಸಾಗುತ್ತಿದ್ದ ಚಳುವಳಿಗಾರರನ್ನು ಮನಬಂದಂತೆ ಥಳಿಸಿದರು. ಎಂಭತ್ತಕ್ಕು ಹೆಚ್ಚು ವಯಸ್ಸಿನ ವೃದ್ಧರೊಬ್ಬರ ಎದೆ ಮೇಲೆ ಒಬ್ಬ ಪೋಲಿಸ್ ಲಾಠಿ ಬೀಸಿದ. ಇದನ್ನು ನೋಡಿ ಕೋಪಗೊಂಡ ಹುಡುಗ ಅಲ್ಲೇ ಕಾಲಬುಡದಲ್ಲಿ ಬಿದ್ದಿದ್ದ ಒಂದು ಕಲ್ಲನ್ನು ತೆಗೆದುಕೊಂಡು ಬೀಸಿದ, ಕಲ್ಲು ನೇರವಾಗಿ ಹೋಗಿ ಆ ಪೋಲೀಸ್ ಹಣೆಗೆ ಬಿತ್ತು. ಅಷ್ಟೇ, ಮರು ಘಳಿಗೆಯಲ್ಲಿ ಬಾಲಕ ಜೈಲುಪಾಲಾಗಿದ್ದ. ಕಟಕಟೆಯಲ್ಲಿ ಹುಡುಗನನ್ನು ವಿಚಾರಣೆ ಮಾಡಲಾಯಿತು. ನ್ಯಾಯಾಧೀಶರಯ ನಿನ್ನ ಹೆಸರೇನು? ಎಂದು ಕೇಳಿದರೆ ಹುಡುಗ ಆಜಾದ್! ಎಂದು ಉತ್ತರಿಸಿದ. ನ್ಯಾಯಾಧೀಶರು ನಿನ್ನ ತಂದೆ ಹೆಸರೇನು? ಎಂದಾಗ ಹುಡುಗ ಸ್ವಾಧೀನತೆಯೆ ನನ್ನ ಅಪ್ಪ ಎಂದುಬಿಟ್ಟ‌. ಮನೆ ಎಲ್ಲಿ? ಎಂದು ಕೇಳಿದಾಗ ಹುಡುಗ ಸೆರೆಮನೆಯೇ ನನ್ನ  ಮನೆ! ಬರೆದುಕೊಳ್ಳಿ ಎಂದ. ನ್ಯಾಯಾಧೀಶರಿಗೆ ಹುಡುಗನ ಉತ್ತರಗಳು...

ಸ್ವಾತಂತ್ರ್ಯ_ಯಾರಿಂದ_ಬಂತು.. #ವಿನಾಯಕ_ದಾಮೋದರ_ಸಾವರ್ಕರ್ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ವಿನಾಯಕ_ದಾಮೋದರ_ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು. ವೀರ ಸಾವರ್ಕರ್ ಹಿನ್ನೆಲೆ ವಿನಾಯಕರು ಮೇ ೨೮, ೧೮೮೩ ರಲ್ಲಿ ಜನಿಸಿದರು. ಸಂಸ್ಕೃತ ವಿದ್ವಾಂಸರ ಪೀಳಿಗೆಯಲ್ಲಿ ಹುಟ್ಟಿದ ಸಾವರ್ಕರರಿಗೆ ಇತಿಹಾಸ, ರಾಜನೀತಿ, ಸಾಹಿತ್ಯ, ಭಾರತಿಯ ಸಂಸ್ಕೃತಿಗಳಲ್ಲಿ ಅತ್ಯಂತ ಆಸಕ್ತಿ. ಅವರು ಬರೆದ ಪುಸ್ತಕ “ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ - 1857” ಅಸಂಖ್ಯಾತ ಸ್ವಾತಂತ್ರ್ಯ ಯೋಧರಿಗೆ ಸ್ಪೂರ್ತಿದಾಯಕವಾಗಿತ್ತು. ದಾಮೋದರಪಂತ ಮತ್ತು ರಾಧಾಬಾಯಿಯ ನಾಲ್ಕು ಮಕ್ಕಳಲ್ಲಿ ಒಬ್ಬರಾದ ವಿನಾಯಕ ಹುಟ್ಟಿದ್ದು ಮಹಾರಾಷ್ಟ್ರದ ನಾಸಿಕ ಪಟ್ಟಣದ ಹತ್ತಿರದ ಭಾಗೂರು ಎಂಬಲ್ಲಿ. ನಾಸಿಕದ ಶಿವಾಜಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವಾಯಿತು. *ಒಂಭತ್ತನೆಯ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡು, ತಂದೆಯ ಪೋಷಣೆಯಲ್ಲಿ ಬೆಳೆದ ವಿನಾಯಕ ಬ್ರಿಟಿಷರ ವಿರುಧ್ಧದ ಸ್...

#ಸ್ವಾತಂತ್ರ್ಯ_ಯಾರಿಂದ_ಬಂತು.. #ರಾಮಚಂದ್ರ_ಪಾಂಡುರಂಗ_ಟೋಪೆ(#ತಾತ್ಯಾ_ಟೋಪೆ)🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ರಾಮಚಂದ್ರ_ಪಾಂಡುರಂಗ_ಟೋಪೆ(#ತಾತ್ಯಾ_ಟೋಪೆ)  (೧೮೧೪ – ಏಪ್ರಿಲ್ ೧೮, ೧೮೫೯) ತಾತ್ಯಾ ಟೋಪೆ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷ್ ಸೇನೆಯ ವಿರುದ್ಧ ಹೋರಾಡಿದ ಮಹಾನ್ ಸೇನಾನಿ ತಾತ್ಯಾ ಟೋಪೆ ಅವರು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆವೋಲಾ ಗ್ರಾಮದಲ್ಲಿ ೧೮೧೪ರ ವರ್ಷದಲ್ಲಿ ಜನಿಸಿದರು. ಅವರ ಪಾಂಡುರಂಗ ರಾವ್ ಜವಳೇಕರ್ ಮತ್ತು ತಾಯಿ ರುಕ್ಮಾಬಾಯಿ. ತಾತ್ಯಾ ಟೋಪೆ ಪ್ರಾರಂಭದಲ್ಲಿ ಬಿಥುರ್ ಪ್ರಾಂತ್ಯದ ನಾನಾ ಸಾಹೇಬನ ಸೇನಾನಿಯಾಗಿದ್ದರು. ಕಾಲಕ್ರಮೇಣದಲ್ಲಿ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಅವರು ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಅವರ ನೆರವಿಗೆ ಬಂದು ಹೋರಾಡಿದರು. ಮಹಾನ್ ಸಂಘಟನಾ ಚತುರ ಸಿಪಾಯಿ ದಂಗೆ ಎಂದು ಬಣ್ಣಿತವಾದ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾನ್ಪುರ, ಕಲ್ಪಿ, ಜಾನ್ಸಿಗಳಲ್ಲಿ ಯುದ್ಧ ಸಂಘಟನೆಗಳನ್ನು ನಡೆಸಿದ ತಾತ್ಯಾ ಟೋಪೆ ಬ್ರಿಟಿಷ್ ಸೇನೆಯನ್ನು ಮಣ್ಣು ಮುಕ್ಕುವಂತೆ ಮಾಡಿದ್ದರು. ಈ ಪ್ರದೇಶಗಳನ್ನು ಬ್ರಿಟಿಷ್ ಸೇನೆ ಪುನಃ ವಶಪಡಿಸಿಕೊಂಡಿತಾದರೂ, ತಾತ್ಯಾ ಅವರು ದೇಶದ ಇತರೆಡೆಗಳಾದ ಬಂದೆಲ್ಖಾಂಡ್, ಮಧ್ಯಭಾರತ, ರಾಜಾಸ್ಥಾನದ ಭರತ್ಪುರ, ಬಿತುಹರ್ ಮುಂತಾದ ಬಹುತೇಕ ಕಡೆಗಳಲ್ಲಿ ಸೇನೆಯನ್ನು ನಿರಂತರವಾಗಿ ಸಂಘಟಿಸುತ್ತಲೇ ಇದ್ದರು. ನರ್ಮದಾ, ಬೆಟ್ವಾ ನದೀತೀರಗಳಿಂದ ಮೊದಲ್ಗೊಂಡು ದಕ್ಷಿಣದ ಖಾಂಡೇಶ್ ವರೆಗೆ ಅವರು ಕ್ರಾ...

ಸ್ವಾತಂತ್ರ್ಯ_ಯಾರಿಂದ_ಬಂತು... #ರಾಸ್_ಬಿಹಾರಿ_ಬೋಸ್ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ರಾಸ್_ಬಿಹಾರಿ_ಬೋಸ್ ಬೋಸರು ಮೇ ೨೫, ೧೮೮೬ರಂದು ಪಶ್ಚಿಮ ಬಂಗಾಳದ ಬುರ್ದ್ವಾನಿನ ಸುಬಲ್ದಹಾ ಹಳ್ಳಿಯಲ್ಲಿ ಜನಿಸಿದರು. ಬೋಸರು ತಮ್ಮ ಸಣ್ಣ ವಯಸ್ಸಿನಲ್ಲೇ ರೆವಲ್ಯೂಷನರಿ ಪಾರ್ಟಿಯನ್ನು ಸೇರಿದರು. ಕ್ರಾಂತಿಕಾರಿ ಚಟುವಟಿಕೆ ದೆಹಲಿ, ಉತ್ತರ ಪ್ರದೇಶ ಮತ್ತು ಪಂಜಾಬುಗಳಲ್ಲಿ ರಾಸ್ ಬಿಹಾರಿ ಬೋಸರು ಹಲವಾರು ಕ್ರಾಂತಿಕಾರಿಗಳೊಡನೆ ಬ್ರಿಟಿಷರ ವಿರುದ್ಧದ ಭೂಗತ ಚಟುವಟಿಕೆಗಳಲ್ಲಿ ನಿರತರಾಗಿದ್ದರು. ಭಾರತದ ವೈಸರಾಯ್ ಆಗಿದ್ದ ಲಾರ್ಡ್ ಹಾರ್ಡಿಂಜನ ಮೆರವಣಿಗೆಯ ಸಂದರ್ಭದಲ್ಲಿ ದೆಹಲಿಯ ಚಾಂದಿನಿ ಚೌಕದಲ್ಲಿ ಡಿಸೆಂಬರ್ ೨೩, ೧೯೧೨ರಂದು ಬಾಂಬ್ ಎಸೆದಾಗ ರಾಸ್ ಬಿಹಾರಿ ಬೋಸರ ಹೆಸರು ಪ್ರಖ್ಯಾತಿ ಪಡೆಯಿತು. ಈ ಬಾಂಬ್ ಎಸೆದ ನಂತರದಲ್ಲಿ ಬೋಸರು ಚಾಣಾಕ್ಷತನದಿಂದ ಪೋಲೀಸರ ಕಣ್ಣು ತಪ್ಪಿಸಿಕೊಂಡು ವಾರಾಣಾಸಿಯಲ್ಲಿ ಅವಿತು, ಗದರ್ ಪಕ್ಷದ ಕಾರ್ಯಕರ್ತರೊಡನೆ ಏಕಕಾಲದಲ್ಲಿ ಉತ್ತರ ಭಾರತದಲ್ಲೆಲ್ಲಾ ಧ್ವನಿಸುವಂತೆ ವಿವಿಧ ಕ್ರಾಂತಿಕಾರಕ ಹೋರಾಟಗಳಿಗೆ ಸೂತ್ರಧಾರಿಯಾದರು. ಜಪಾನಿನಲ್ಲಿ ರಾಸ್ ಬಿಹಾರಿ ಬೋಸರ ಈ ಎಲ್ಲಾ ಯತ್ನಗಳನ್ನೂ ಬ್ರಿಟಿಷರು ಸದೆಬಡಿದು ಗದರ್ ಕ್ರಾಂತಿಕಾರರಲ್ಲಿ ಬಹಳಷ್ಟು ಜನರನ್ನು ಶಿಕ್ಷೆಗೆ ಒಳಪಡಿಸಿದರಾದರೂ ರಾಸ್ ಬಿಹಾರಿ ಬೋಸರನ್ನು ಮಾತ್ರ ಹಿಡಿಯಲಾಗಲಿಲ್ಲ. ಬ್ರಿಟಿಷರಿಗೆ ಚಳ್ಳೆಹಣ್ಣು ತಿನ್ನಿಸಿ ಜಪಾನಿಗೆ ತೆರಳಿದ್ದ ರಾಸ್ ಬಿಹಾರಿ ಬೋಸರ ಬಗ್ಗೆ ಆತಂಕಗೊಂಡ ಬ್ರಿಟಿಷರು ಅಂತಾರಾಷ್ಟ್ರೀಯ ಮಟ್ಟದಲ್ಲಿ ...

ಸ್ವಾತಂತ್ರ್ಯ_ಯಾರಿಂದ_ಬಂತು.. #ರಾಜಗುರು 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ರಾಜಗುರು ಭಾರತ ಸ್ವಾತಂತ್ರ್ಯದ ಅಪೂರ್ವ ಹೋರಾಟಗಾರರಲ್ಲೊಬ್ಬರು. ಮಧ್ಯಮವರ್ಗದ ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ ಇವರು, ತೀರಾ ಎಳೆ ವಯಸ್ಸಿನಲ್ಲೇ ಕ್ರಾಂತಿಕಾರಿಯಾಗಿದ್ದ ಕೆಲವೇ ಮುಖಂಡರಲ್ಲಿ ಒಬ್ಬರು. ಭಗತ್‍ಸಿಂಗ್ ಅವರ ಪಕ್ಷದಲ್ಲಿ ಗನ್‍ಮ್ಯಾನ್ ಆಗಿದ್ದ ರಾಜಗುರು, ಲಾಲಾ ಲಜಪತ್‍ರಾಯ್ ಅವರ ಹತ್ಯೆಗೆ ಪ್ರತೀಕಾರವಾಗಿ ಸೌಂಡರ್ಸ್ ಅವರನ್ನು ಹತ್ಯೆ ಮಾಡಿದ ಬಳಿಕ ಅವರು ಅತ್ಯಂತ ಜನಪ್ರಿಯರಾದರು. ಈ ಅಪರಾಧಕ್ಕಾಗಿ ಅವರನ್ನು 23ನೇ ವಯಸ್ಸಿನಲ್ಲೇ ಗಲ್ಲಿಗೇರಿಸಲಾಯಿತು. ರಾಜಗುರು 1908ರ ಆಗಸ್ಟ್ 24ರಂದು ಹುಟ್ಟಿದರು. 2016ರ ಆಗಸ್ಟ್ 24ರಂದು ಅವರ 108ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪುಣೆ ಬಳಿಕ ಖೇಡ್‍ನಲ್ಲಿ ರಾಜಗುರು ಶಿವರಾಂ ಹರಿ ರಾಜಗುರು ಎಂಬ ಹೆಸರು ಹೊಂದಿದ್ದರು. ಗಾಂಧೀಜಿಯವರ ಅಹಿಂಸಾತ್ಮಕ ಕಾನೂನುಭಂಗ ಚಳವಳಿಯಲ್ಲಿ ಅವರು ನಂಬಿಕೆ ಇಟ್ಟಿರಲಿಲ್ಲ. ಬ್ರಿಟಿಷರು ನಡೆಸುದ ದಬ್ಬಾಳಿಕೆಗೆ ಕ್ರಾಂತಿಯೊಂದೇ ಮಾರ್ಗ ಎಂದು ಅವರು ಬಲವಾಗಿ ನಂಬಿದ್ದರು. ಆದ್ದರಿಂದ ಇದಕ್ಕಾಗಿ ಹಿಂದೂಸ್ತಾನ್ ಸೋಶಲಿಸ್ಟ್ ರಿಪಬ್ಲಿಕನ್ ಆರ್ಮಿ ಸೇರಿದರು. ಯಾವುದೇ ವಿಧಾನದಲ್ಲಾದರೂ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಬೇಕು ಎನ್ನುವುದೇ ಅವರ ಧ್ಯೇಯವಾಗಿತ್ತು. ರಾಜಗುರು ಅವರು ಭಗತ್ ಸಿಂಗ್ ಹಾಗೂ ಸುಖದೇವ್ ಅವರ ಜತೆ ಸೇರಿಕೊಂಡು, ಬ್ರಿಟಿಷ್ ಪೊಲೀಸ್ ಅಧಿಕಾರಿ ಜೆ.ಪಿ.ಸೌಂಡ್ರಸ್ ಅವರನ್ನು 1928ರಲ್ಲಿ ಲಾಹೋರ್‍ನ...

ಸ್ವಾತಂತ್ರ್ಯ_ಯಾರಿಂದ_ಬಂತು.. #ಚಾಪೇಕರ್_ಸಹೋದರರು🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಚಾಪೇಕರ್_ಸಹೋದರರು ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮೈಲಾರ ಮಹಾದೇವರ ಕುಟುಂಬ ಸೆರೆವಾಸ ಅನುಭವಿಸಿದರೆ ವಿವೇಕಾನಂದರ ಕುಟುಂಬ ರಾಷ್ಟ್ರಜಾಗೃತಿಯಲ್ಲಿ ತೊಡಗಿಕೊಂಡ ಸ್ಫೂರ್ತಿದಾಯಕ ಕಥೆಯನ್ನು ಇದೇ ಸರಣಿಯಲ್ಲಿ ಹಿಂದೆ ಓದಿದ್ದೇವೆ. ಪುಣೆಯ ಚಾಪೇಕರ್ ಕುಟುಂಬ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಬಲಿದಾನಗೈದು ಭಾರತಮಾತೆಯ ದಾಸ್ಯ ವಿಮುಕ್ತಿ ಆಂದೋಲನದಲ್ಲಿ ಸಂಪೂರ್ಣವಾಗಿ ತನ್ನನ್ನು ಸಮರ್ಪಿಸಿಕೊಂಡ ಕಥೆ ರೋಮಾಂಚನಕಾರಿ. ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ದಾಮೋದರ ಚಾಪೇಕರ್, ಬಾಲಕೃಷ್ಣ ಚಾಪೇಕರ್ ಮತ್ತು ವಾಸುದೇವ್ ಚಾಪೇಕರ್ ತಮ್ಮ ಅಪ್ರತಿಮ ಶೌರ್ಯ ಹಾಗೂ ದೇಶಭಕ್ತಿಯಿಂದಾಗಿ ಕ್ರಾಂತಿಯ ಕಹಳೆ ಮೊಳಗಿಸಿ ಬಲಿದಾನಗೈದ ಕಥೆ ಇತಿಹಾಸದಲ್ಲಿ ಅಪರೂಪದ ಸಂಗತಿ. ದೇಶದ ಇತರ ಕ್ರಾಂತಿಕಾರಿಗಳ ಹೋರಾಟದ ಯಶೋಗಾಥೆಯನ್ನು, ಬಲಿದಾನದ ಸಾಹಸ ಕಥೆಯನ್ನು ಕೇಳುತ್ತಲೇ ಬೆಳೆದ ಚಾಪೇಕರ್ ಸಹೋದರರಿಗೆ ತಾವೂ ದೇಶದ ದಾಸ್ಯ ವಿಮುಕ್ತಿಗೆ ಹೋರಾಡಬೇಕೆಂಬ ಕನಸು ಹುಟ್ಟಿತು. ಇಂಗ್ಲಿಷರ ದರ್ಪ ದಬ್ಬಾಳಿಕೆಯ ವಿರುದ್ಧ ಹೋರಾಡಲು ಶರೀರಬಲ ಬೇಕು, ಸಂಘಟನೆ ಬೇಕು ಎಂದು ನಿರ್ಧರಿಸಿದ ಚಾಪೇಕರ್ ಸಹೋದರರು ದಿನನಿತ್ಯ ಕಠಿಣ ವ್ಯಾಯಾಮ ಯೋಗಾಭ್ಯಾಸದಲ್ಲಿ ನಿರತರಾದರು. ಮದುವೆಯಾಗಿ ಮಕ್ಕಳಾಗಿ ಹೊಸ ಜವಾಬ್ದಾರಿಗಳು ಬಂದರೂ ಅವರ ಸ್ವಾತಂತ್ರ್ಯದ ಕನಸು ದೂರಾಗಲಿಲ್ಲ. ಕ್ರಾಂತಿಕಾರಿ ಕೆಲಸಗಳಿಗಾಗಿ, ಸ್ವಾತಂತ್ರ‍್ಯಕ್ಕೋಸ್ಕರ ಬಲಿದಾನ ಮಾಡಲು ಹಿಂಜರಿ...

ಸ್ವಾತಂತ್ರ್ಯ_ಯಾರಿಂದ_ಬಂತು.. #ವೀರ_ಸೇನಾನಿ_ನೇತಾಜಿ_ಸುಭಾಷ್_ಚಂದ್ರ_ಬೋಸ್ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ವೀರ_ಸೇನಾನಿ_ನೇತಾಜಿ_ಸುಭಾಷ್_ಚಂದ್ರ_ಬೋಸ್ ಭಾರತ ದೇಶ ಕಂಡ ಅಪ್ರತಿಮ ದೇಶಭಕ್ತ, ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಈ ಮಹಾನ್ ರಾಷ್ಟ್ರ ನಾಯಕನ ಜೀವನದ ಘಟನೆಗಳ ಮೆಲುಕೇ ಸ್ಪೂರ್ತಿಯುತವಾದುದು. ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭರತಮಾತೆಯ ಈ ಧೀರ ಕುವರನ ಜನುಮ ದಿನ (ಜನವರಿ 23) ದಂದು ಸದಾ ಕ್ರಿಯಾಶಿಲರಾಗಿದ್ದ ದೇಶಕ್ಕಾಗಿ ತಮ್ಮ ಬದುಕನ್ನೇ ಮುಡುಪಿಟ್ಟ ಆ ಮಹಾನ್ ಚೇತನವನ್ನು ನಾವೆಲ್ಲ ಒಂದಾಗಿ ಸ್ಮರಿಸೋಣ. ಭಾರತೀಯರೆಲ್ಲರ ಪ್ರೀತಿಯ “ನೇತಾಜಿ”ಯಾಗಿದ್ದ ಸುಭಾಷ್ ಚಂದ್ರ ಬೋಸ್ ಹುಟ್ಟಿದ್ದು 1897 ಜನವರಿ 23 ರಂದು ಒರಿಸ್ಸಾದ ಕಟಕ್ ನಲ್ಲಿ. ಜಾನಕಿನಾಥ ಬೋಸ್ ಮತ್ತು ಪ್ರಭಾವತಿ ದಂಪತಿಗಳ ಒಂಭತ್ತು ಜನ ಮಕ್ಕಳಲ್ಲಿ ಸುಭಾಷ್ ಆರನೆಯವರು. ಕಟಕ್ ನಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿದ ಬೋಸ್ ಸಣ್ಣ ವಯಸ್ಸಿನಲ್ಲಿಯೇ ಸ್ವಾಮಿ ವಿವೇಕಾನಂದ, ಮಹರ್ಷಿ ಅರವಿಂದರ ಸಾಹಿತ್ಯಗಳಿಂದ ಪ್ರಭಾವಿತರಾಗಿದ್ದರು. 1919 ರಲ್ಲಿ ತತ್ವಶಾಸ್ತ್ರ ವಿಷಯದಲ್ಲಿ ಬಿ.ಎ. ಪದವಿ ಪಡೆದ ಬೋಸ್ 1920 ರ ಸಪ್ಟೆಂಬರ್ ನಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಐ.ಸಿ.ಎಸ್. ಪರೀಕ್ಷೆಯಲ್ಲಿ  ನಾಲ್ಕನೆ ಸ್ಥಾನದೊಂದಿಗೆ ಉತ್ತೀರ್ಣರಾದರು. ವಿದೇಶದಲ್ಲಿ ಕೆಲಸ ಮಾಡಲು ಒಪ್ಪದ ಬೋಸ್ ತಾವು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ 1...

ಸ್ವಾತಂತ್ರ್ಯ_ಯಾರಿಂದ_ಬಂತು.. #ಭಗತ್_ಸಿಂಗ್..🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಭಗತ್_ಸಿಂಗ್ ಇಂದು ನಾವು ಸುಖಮಯ ಜೀವನ ನಡೆಸುತ್ತಿರುವ ಹಿಂದೆ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಅವರ ಹಗಲಿರುಳ ಅಪಾರವಾದ ಶ್ರಮ ಅಡಗಿದೆ, ಈ ಪುಣ್ಯ ಭೂಮಿ ಭಾರತಾಂಬೆಯ ಭವ್ಯ ನೆಲವನ್ನು ಬ್ರಿಟಿಷರಿಂದ ರಕ್ಷಿಸಿಕೊಳ್ಳಲು ಅಂದು ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ್ದರು. ತಮ್ಮ ಇಡೀ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟು ಬ್ರಿಟಿಷರ ವಿರುದ್ದ ರಣರಂಗಕ್ಕೆ ಧುಮಿಕಿ ಹೋರಾಟ ನಡೆಸಿದ ಪರಿಣಾಮ ಭಾರತ ದೇಶಕ್ಕೆ ಬ್ರಿಟಿಷರಿಂದ ಮುಕ್ತಿ ಸಿಕ್ಕಿ ಸ್ವತಂತ್ರ ರಾಷ್ಟ್ರವಾಗಿ ರೂಪಾಂತರಗೊಂಡಿತು ಹಾಗೂ ನಾವೆಲ್ಲರು ಸ್ವತಂತ್ರ್ಯವಾಗಿ ಜೀವಿಸಲು ಸಾಧ್ಯವಾಯಿತು ಎಂಬುವುದರಲ್ಲಿ ಎರಡು ಮಾತಿಲ್ಲ. ನಮ್ಮ ದೇಶದಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ನಡುವೆ ಸ್ವಲ್ಪ ಭಿನ್ನವಾಗಿ ಕಾಣುವ ವ್ಯಕ್ತಿ ಎಂದರೆ ಭಗತ್ ಸಿಂಗ್, ಭಗತ್ ಸಿಂಗ್ ಬದುಕಿದ್ದು ಕೇವಲ 24 ವರ್ಷಗಳು ಮಾತ್ರ, ಆದರು ಅವರು ಮಾಡಿದ ಸಾಧನೆ ಮಾತ್ರ ಅಪಾರ, ಚಕ್ ಬಂಗಾ ಎಂಬ ಸಣ್ಣ ಗ್ರಾಮದಲ್ಲಿ ವಾಸವಾಗಿದ್ದ ಕಿಶನ್ ಸಿಂಗ್ ಹಾಗೂ ವಿದ್ಯಾವತಿ ದಂಪತಿಯ ಮಗನಾಗಿ ಜನ್ಮ ತಾಳಿದ ಭಗತ್ ಸಿಂಗ್ ಜಲಿಯನ್ ವಾಲಾಬಾಗ್ ನಲ್ಲಿ ನಡೆದ ಹತ್ಯಾಕಾಂಡದಿಂದ ನೂರಾರು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ದೇಶಕ್ಕಾಗಿ ಅರ್ಪಿಸಬೇಕಾಯಿತು. ಈ ಘಟನೆಯಿಂದ ಸಿಡಿದೆದ್ದ ಭಗತ್ ಸಿಂಗ್ ತನ್ನ 13ನೇ ವರ್ಷದ ವಯಸ್ಸಿನಲ್ಲೇ ದೇಶ ಸೇವೆ...

#ಸ್ವಾತಂತ್ರ್ಯ_ಯಾರಿಂದ_ಬಂತು... #ಲೋಕಮಾನ್ಯ_ಬಾಲ_ಗಂಗಾಧರ_ತಿಲಕ್ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಲೋಕಮಾನ್ಯ_ಬಾಲ_ಗಂಗಾಧರ_ತಿಲಕ್ (೨೩.೦೭.೧೮೫೬ - ೦೧.೦೮.೧೯೨೦) ಭಾರತೀಯ ರಾಷ್ತ್ರೀಯವಾದಿ, ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ತಿಲಕರು ಬಹುಶಃ ಭಾರತದ ಸ್ವಾತಂತ್ರ್ಯ ಹೋರಾಟದ ಚಳುವಳಿಯ ಮೊದಲನೇ ಜನಪ್ರಿಯ ನಾಯಕ. ಭಾರತೀಯರ ಪ್ರಜ್ಙೆಯಲ್ಲಿ ಸಂಪೂರ್ಣ ಸ್ವರಾಜ್ಯದ ಕಿಚ್ಚು ಹಚ್ಚಿದ ತಿಲಕರು ಹಿಂದೂ ರಾಷ್ತ್ರೀಯತಾವಾದದ ಪಿತಾಮಹ ಎಂದೂ ಹೆಸರಾಗಿದ್ದಾರೆ. ಸ್ವರಾಜ್ಯ ನಮ್ಮ ಜನ್ಮಸಿಧ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ ಎಂಬ ಇವರ ಘರ್ಜನೆ ಅಂದು ಜನಪ್ರಿಯವಾದದ್ದಷ್ತೇ ಅಲ್ಲ, ಇಂದಿಗೂ ಜನ ಸಾಮಾನ್ಯರ ನೆನಪಿನಲ್ಲಿ ಹಸುರಾಗಿದೆ."ಲೋಕಮಾನ್ಯ" (ಜನಗಳ ಪ್ರೀತಿ ಪಾತ್ರರು / ಗೌರವಕ್ಕೆ ಪಾತ್ರರಾದವರು) ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ತಿಲಕರು ಭಾರತದ ಇತಿಹಾಸ, ಸಂಸ್ಕ್ರತ , ಹಿಂದೂ ಧರ್ಮ, ಗಣಿತ ಹಾಗೂ ಖಗೋಳ ಶಾಸ್ತ್ರಗಳ ಆಳವಾದ ಅಭ್ಯಾಸ ಮಾಡಿದ್ದರು ಲೋಕಮಾನ್ಯ ಬಾಲ ಗಂಗಾಧರ ತಿಲಕ ಬಾಲ್ಯ ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಾಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು. ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ ಸೇರಿದ ತಿಲಕರು , ನಂತರ ಅದನ್ನು ...

ಸ್ವಾತಂತ್ರ್ಯ_ಯಾರಿಂದ_ಬಂತು... ವಾಸುದೇವ_ಬಲವಂತ_ಫಡಕೆ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ವಾಸುದೇವ_ಬಲವಂತ_ಫಡಕೆ  ೧೮೫೭ ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ನಂತರ ಭಾರತ ತಣ್ಣಗಾಗಿ ಹೋಗಿದೆ, ಭಾರತೀಯರು ತಮ್ಮ ಗುಲಾಮರಾಗಿದ್ದಾರೆ ಎಂದೇ ಭಾವಿಸಿದ್ದ ಬ್ರಿಟಿಷರಿಗೆ ಭಾರತೀಯರ ಕಿಚ್ಚು ಇನ್ನೂ ಆರಿಲ್ಲ ಎಂದು ತೋರಿಸಿದ ಕ್ರಾಂತಿ ಪುರುಷ, ಸ್ವಾತಂತ್ರ್ಯ ದಧೀಚಿ ವಾಸುದೇವ ಬಲವಂತ ಫಡಕೆ. ಆತನ ಮನೆಯಲ್ಲಿ ಎಲ್ಲವೂ ಇತ್ತು - ಹಣ , ಸುಖ, ಶಾಂತಿ, ನೆಮ್ಮದಿ. ಆದರೆ ದೇಶದಲ್ಲಿ ಇವ್ಯಾವುದೂ ಇಲ್ಲ ಎಂಬ ಕಾರಣಕ್ಕೆ ಎಂಬ ಕಾರಣಕ್ಕೆ ಆತ ಕ್ರಾಂತಿಗಿಳಿದ. ಚಿಕ್ಕಂದಿನಿಂದಲೇ ಅಜ್ಜ ಹಾಗೂ ತಂದೆಯಿಂದ ದೇಶಭಕ್ತಿಯ ಕಥೆಗಳನ್ನು ಕೇಳುತ್ತಾ ಬೆಳೆದ ವಾಸುದೇವನಿಗೆ ಹೇಗಾದರೂ ಮಾಡಿ ದೇಶವನ್ನು ದಾಸ್ಯಮುಕ್ತಗೊಳಿಸಬೇಕು ಎಂಬ ಹಂಬಲವಿತ್ತು. 1859 ರಲ್ಲಿ ತನ್ನ ಕಾಲೇಜು ಶಿಕ್ಷಣದ ನಂತರ ಆತ ಪುಣೆಯ ಮಿಲಿಟರಿ ಫೈನಾನ್ಸ್ ಕಚೇರಿಯಲ್ಲಿ ಕೆಲಸಕ್ಕೆ ಸೇರಿಕೊಂಡ. ಬ್ರಿಟಿಷ್ ಸರ್ಕಾರದ ಕೆಲಸವಾದರೂ ಒಳಗೊಳಗೇ ಆತನ ಸ್ವಾತಂತ್ರ್ಯದ ಆಸೆ ಬಲಗೊಳ್ಳುತ್ತಲೇ ಇತ್ತು. ಅದೇ ಸಮಯಕ್ಕೆ ವಾಸುದೇವನ ತಾಯಿ ಅನಾರೋಗ್ಯ ಪೀಡಿತರಾದಾಗ ಆತ ಕೆಲಸಕ್ಕೆ ರಜೆ ಕೇಳಿದ, ಬ್ರಿಟೀಷ್ ಅಧಿಕಾರಿಗಳ ಕೃಪಾಕಟಾಕ್ಷದಿಂದ ರಜೆ ದೊರೆಯುವ ವೇಳೆಗೆ ವಾಸುದೇವನ ತಾಯಿ ತೀರಿಕೊಂಡಿದ್ದರು. ತನ್ನ ತಾಯಿಯ ಅಂತಿಮ ದರ್ಶನಕ್ಕೂ ಅವಕಾಶ ನೀಡದ ಬ್ರಿಟಿಷರ ವಿರುದ್ಧ ಸಿಡಿದೆದ್ದ ವಾಸುದೇವ 'ಇವರು ನನ್ನ ತಾಯಷ್ಟೇ ಅಲ್ಲ, ಭಾರತಮಾತೆಯಿಂದಲೂ ನಮ್ಮನ್ನು ದೂರಮಾಡುತ್ತಿದ್ದಾರೆ' ...

ಸ್ವಾತಂತ್ರ್ಯ_ಯಾರಿಂದ_ಬಂತು... ಲಾಲಾ_ಲಜಪತ್_ರಾಯ್ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಲಾಲಾ_ಲಜಪತ್_ರಾಯ್ ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲು ಕ್ರಾಂತಿಕಾರಿ ಹೋರಾಟದ ಹಾದಿ ತುಳಿದ ಪ್ರಮುಖರಲ್ಲಿ ಲಾಲಾ ಲಜಪತ್ ರಾಯ್ ಒಬ್ಬರು. ಪಂಜಾಬ್ ಕೇಸರಿ ಎಂದೇ ಖ್ಯಾತರಾಗಿದ್ದ ಇವರು ಬ್ರಿಟಿಷರ ವಿರುದ್ಧ ಹೋರಾಡಲು ಮತ್ತು ಯುವಕರಲ್ಲಿ ರಾಷ್ಟ್ರಪ್ರೇಮ ಮೂಡಿಸಲು ತಮ್ಮ ಪ್ರಖರ ಮಾತಿನ ಮೂಲಕವೇ ಕ್ರಾಂತಿಯ ಕಿಚ್ಚು ಹಚ್ಚಿದರು. ಡಿ.ಎಲ್.ಹರೀಶ ಬೆಂಗಳೂರು ಈ ಭೂಮಿ ಮೇಲೆ ಚೆಲ್ಲಿರುವುದು ನಮ್ಮ ಪೂರ್ವಜರ ರಕ್ತ. ನಾವು ಈ ಭೂಮಿಯನ್ನು ಬಳಸುತ್ತಿದ್ದೇವೆ. ಅದರ ಮೇಲೆ ವಾಸಿಸುತ್ತಿದ್ದೇವೆ. ಆದ್ದರಿಂದ ಈ ಭೂಮಿ ನಮ್ಮದು ಇಲ್ಲವೇ ದೇವರದ್ದು…’ ಹೀಗೆ ತಮ್ಮ ಪ್ರಖರ ಮಾತುಗಳ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚು ಹಚ್ಚಿದವರು ಅಪ್ರತಿಮ ವೀರ ಲಾಲಾ ಲಜಪತ್​ರಾಯ್. ಲಾಲ್-ಬಾಲ್-ಪಾಲ್ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಅವಲೋಕಿಸಿದಾಗ ಒಟ್ಟಿಗೆ ಕಾಣಿಸಿಕೊಳ್ಳುವ ಹೆಸರುಗಳು. ಲಾಲ್ ಎಂದರೆ ಲಾಲಾ ಲಜಪತರಾಯ್, ಬಾಲ್ ಎಂದರೆ ಬಾಲ ಗಂಗಾಧರ ತಿಲಕ್, ಪಾಲ್ ಎಂದರೆ ಬಿಪಿನ್ ಚಂದ್ರಪಾಲ್. ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಮಂದಗತಿಯಲ್ಲಿ ಸಾಗುತ್ತಿದ್ದ ಹೋರಾಟದ ದಿಕ್ಕನ್ನು ಬದಲಿಸಿದ ಈ ಯುವಕರು ಕ್ರಾಂತಿಕಾರಿ ಹೋರಾಟದಿಂದಷ್ಟೇ ಸ್ವರಾಜ್ಯದ ಕನಸು ನನಸಾಗಲು ಸಾಧ್ಯ ಎಂಬುದನ್ನು ಸಾರಿದರು. ಇವರಲ್ಲಿ ಪಂಜಾಬ್ ಕೇಸರಿ ಎಂದ...

ಸ್ವಾತಂತ್ರ್ಯ_ಯಾರಿಂದ_ಬಂತು... ಉಧಮ್_ಸಿಂಗ್ 🙏🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಉಧಮ್_ಸಿಂಗ್ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಾರತದ ಸ್ವಾತಂತ್ರ್ಯ ಇತಿಹಾಸದಲ್ಲಿ ಬ್ರಿಟೀಷರು ಕೈಗೊಂಡ ಅಮಾನವೀಯ ಕೃತ್ಯ. ಬ್ರಿಟೀಷ್ ಸೈನ್ಯದ ಕೌರ್ಯಕ್ಕೆ ಅಂದು ನೂರಾರು ಮಂದಿ ಬಲಿಯಾದರೆ ಹೆಂಗಸರು,ಮಕ್ಕಳು ಸೇರಿ ಸಾವಿರಾರು ದೇಶಭಕ್ತರು ಗಾಯಗೊಂಡರು.‌ ಈ ಘಟನೆಯನ್ನು ಕಣ್ಣಾರೆ ಕಂಡ ಒಬ್ಬ ಯವಕ ಹತ್ಯಾಕಾಂಡದ ರೂವಾರಿ ಮೈಕೇಲ್ ಓಡ್ವಯರನನ್ನು ಕೊಂದು 21  ವರ್ಷಗಳ ನಂತರ ತನ್ನ ಭಾರತೀಯ ಬಂಧುಗಳ ಸಾವಿಗೆ ಪ್ರತೀಕಾರ ತೀರಿಸಿಕೊಂಡ. ಆ ಯುವಕನ ಹೆಸರೇ ಉಧಮ್ ಸಿಂಗ್. ಗುರಿಗಾಗಿ ಬಾಳಿದ ಆ ಮಹಾನ್ ವೀರನ ಕುರಿತು ತಿಳಿಸುವುದೇ ಈ ಲೇಖನದ ಆಶಯ. ಉಧಮ್ ಸಿಂಗ್ 1899 ಡಿಸೆಂಬರ್ 26ರಂದು ಸುನಾಮದ ಶಹಪುರದಲ್ಲಿ ಜನಿಸಿದನು. ಉಧಮ್ ಸಿಂಗನ ತಂದೆ ಟಹಲ್ ಸಿಂಹ ಚೌಕಿದಾರನಾಗಿ ಕೆಲಸ ಮಾಡುತ್ತಿದ್ದನು. ಅಲ್ಪ ಆದಾಯದಿಂದ ಜೀವನ ಸಾಗಿಸುವುದೇ ಕಷ್ಟವಾಗಿತ್ತು. ಉಧಮ್ ಸಿಂಗನಿಗೆ ಎರಡು ವರ್ಷವಿರುವಾಗ ಆತನ ತಾಯಿ ಮರಣ ಹೊಂದಿದರು. ಉಧಮ್ ಸಿಂಗನಿಗೆ ಏಳು ವರ್ಷವಿರುವಾಗ ತಂದೆ ಟಹಲ್ ಸಿಂಹನು ಅಸುನೀಗಿದ. ಉಧಮ್ ಸಿಂಗ್ ಮತ್ತು ಅಣ್ಣ ಸಾಧು ಸಿಂಹ ಅನಾಥರಾದರು. ಚಂಚಲ್ ಸಿಂಹ ಎಂಬ ವ್ಯಕ್ತಿ ಈ ಇಬ್ಬರನ್ನು ಕಂಡು ಅನಾಥಾಲಯಕ್ಕೆ ಸೇರಿಸಿದರು. ಇಬ್ಬರು ಶಾಲೆಗೆ ಸೇರಿ ಓದು ಮುಂದುವರೆಸಿದರು. ಜೊತೆಗೆ ಸಣ್ಣ ಪುಟ್ಟ ಕೈ ಕೆಲಸವನ್ನು ಕಲಿತರು. ಈ ವೇಳೆಗೆ ಅಣ್ಣ ಸಾಧುಸಿಂಹನು ತೀರಿಕೊಂಡನು. ಉಧಮ್ ಸಿಂಗನಿಗೆ ಬಾರಿ ಆಘಾತವಾಯಿತು. ಕಷ್ಟ ಆತನ ಬೆನ...

ಸ್ವಾತಂತ್ರ್ಯ_ಯಾರಿಂದ_ಬಂತು.. ಮದನ್_ಲಾಲ್_ದಿಂಗ್ರ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಮದನ್_ಲಾಲ್_ದಿಂಗ್ರ ಅದು ಲಂಡನ್ನಿನ ಭಾರತ ಭವನ ಹಾಸ್ಟೆಲ್. ಅಲ್ಲಿದ್ದ ವಿದ್ಯಾರ್ಥಿಗಳೆಲ್ಲಾ ಭಾರತೀಯರು. ಅವರಲ್ಲೊಬ್ಬ ತನ್ನ ಕೈಯ್ಯನ್ನು ಮೇಜಿನ ಮೇಲೆ ಊರಿದ್ದ. ಇನ್ನೊಬ್ಬ ಗೆಳೆಯ ಅದರ ಮೇಲೆ ಗುಂಡು ಸೂಜಿಯಿಂದ ಬಲವಾಗಿ ಚುಚ್ಚುತ್ತಿದ್ದ. ಆದರೆ ಯುವಕನ ಮುಖದಲ್ಲಿ ನೋವಿನ ಗೆರೆ ಎಳ್ಳಷ್ಟು ಮೂಡಲಿಲ್ಲ. ನೋಡು ನೋಡುತ್ತಿದ್ದಂತೆ ರಕ್ತ ಚಿಲ್ಲನೆ ಹಾರುತ್ತಾ ಸೂಜಿ ಒಳಗಿಳಿಯಿತ್ತು! ಸುತ್ತ ನೆರೆದಿದ್ದ ಡಜನ್’ಗಟ್ಟಲೆ ಗೆಳೆಯರು ಹೌಹಾರಿದರು. ಆದರೆ ಯುವಕನ ಕಣ್ಣಲ್ಲಿ ಅದೇ ಗಟ್ಟಿತನ. ನೋವು ಬಿಡಿ ತುಟಿಗಳಲ್ಲಿದ್ದ ಮಂದಸ್ಮಿತ ಕೂಡ ಅಲುಗಾಡಲಿಲ್ಲ! ಇಂತಹುದೊಂದು ಸಾಹಸ ಮಾಡಿದ್ದ ಯುವಕ ಬೇರಾರೂ ಅಲ್ಲ. ಭಾರತದ ಸ್ವಾತಂತ್ರ್ಯದ ಹೋರಾಟದ ಕ್ರಾಂತಿಯ ಕಿಡಿ ಮದನ್’ಲಾಲ್ ದಿಂಗ್ರಾ! ಅಷ್ಟಕ್ಕೂ ಆತ ಮಾಡಿದ್ದು ತನ್ನ ವೈಯಕ್ತಿಕ ತಾಕತ್ತನ್ನು ಪ್ರದರ್ಶಿಸಲು ಅಲ್ಲ. ಜಪಾನಿಯರಷ್ಟು ಸಾಹಸಿಗಳು ಯಾರೂ ಇಲ್ಲ ಎಂದು ಗೆಳೆಯನೊಬ್ಬ ಕಿಚಾಯಿಸಿದ್ದಕ್ಕೆ ‘ಹಿಂದೂಸ್ಥಾನದವರೇನೂ ಕಡಿಮೆ ಇಲ್ಲ’ ಎಂಬುದನ್ನು ತೋರಿಸಲು ಈ ಸಾಹಸ ಮೆರೆದಿದ್ದು!! ಮದನ್’ಲಾಲ್ ದಿಂಗ್ರ. ಇದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪುಟಗಳಲ್ಲಿ ಅಚ್ಚೊತ್ತಲ್ಪಟ್ಟಿರುವ ಹೆಸರು. ಈತ ಹುಟ್ಟಿದ್ದು ಅಮೃತಸರದ ಆಗರ್ಭ ಶ್ರೀಮಂತ ಕುಲದಲ್ಲಿ (1883). ತಂದೆ ಸಾಹಿಬ್ ದಿತ್ತಾ. ಈತ ಅದೆಷ್ಟು ಶ್ರೀಮಂತನೆಂದರೆ ಆ ಕಾಲಕ್ಕೇ ಈತ ೨೩ ಮನೆ, ೬ ಬಂಗ್ಲೆಗಳ ಒಡೆಯ! ಇಡೀ ಅಮೃತಸರದಲ್...

ಸ್ವಾತಂತ್ರ್ಯ_ಯಾರಿಂದ_ಬಂತು.....ಕಿತ್ತೂರು_ರಾಣಿ_ಚೆನ್ನಮ್ಮ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಕಿತ್ತೂರು_ರಾಣಿ_ಚೆನ್ನಮ್ಮ ಬೆಳಗಾವಿ ಜಿಲ್ಲೆಯ ಕಿತ್ತೂರು ಇಂದು ರಾಣಿ ಚೆನ್ನಮ್ಮನಿಂದಾಗಿ ವಿಶ್ವ ವಿಖ್ಯಾತವಾಗಿದೆ. ಈ ಕಿತ್ತೂರನ್ನು ಆಳಿದ ದೇಸಾಯಿಗಳಲ್ಲಿ ಅತ್ಯಂತ ಪ್ರಮುಖರಾದ ಮಲ್ಲಸರ್ಜ ದೇಸಾಯಿಯವರ ಎರಡನೇ ಪತ್ನಿಯಾಗಿದ್ದ ವೀರ ರಾಣಿ ಚೆನ್ನಮ್ಮ ತನ್ನ ಪುಟ್ಟ ರಾಜ್ಯ ಕಿತ್ತೂರಿನ ರಕ್ಷಣೆಗಾಗಿ ಬಹುತೇಕ ಭಾರತವನ್ನೇ ಆಕ್ರಮಿಸಿಕೊಂಡಿದ್ದ ಪ್ರಬಲರಾದ ಬ್ರಿಟೀಷರ ವಿರುದ್ದ ಸೆಟೆದು ನಿಂತವಳು. ತಾನೊಬ್ಬಳೇ ಏಕಾಂಗಿಯಾಗಿ ಹೋರಾಡಿದ ಈ ಧೀರ ಮಹಿಳೆಯ ಕಥೆ ಎಂಥವರಿಗೂ ಸ್ಪೂರ್ತಿದಾಯಕವಾಗಬಲ್ಲುದು. ರಾಣಿ ಚೆನ್ನಮ್ಮ ಹುಟ್ಟಿದ್ದು ಬೆಳಗಾವಿ ನಗರದಿಂದ ಆರು ಕಿಲೋಮೀತರ್ ದೂರದಲ್ಲಿರುವ ಕಾಕತಿ ಎಂಬ ಪುಟ್ಟ ಗ್ರಾಮದಲ್ಲಿ. ೧೭೭೮ರಲ್ಲಿ ಹುಟ್ಟಿದ ಚೆನ್ನಮ್ಮಳ ತಂದೆ ಕಾಕತಿಯ ದೇಸಾಯಿಯಾಗಿದ್ದ ಧೂಳಪ್ಪಗೌಡರು. ಚೆನ್ನಮ್ಮ ತಾನು ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ಲು ವಿದ್ಯೆಯಲ್ಲಿ ಪರಿಣಿತಿಯನ್ನು ಪಡೆದಿದ್ದಳು. ಚಿಕ್ಕಂದಿನಿಂದಲೂ ಅಂಜಿಕೆ ಯಿರದ ಧೈರ್ಯವಂತೆಯಾಗಿದ್ದ ಚೆನ್ನಮ್ಮಳು ತಾನು ಎಂತಹಾ ಕಷ್ಟದ ಪರಿಸ್ಥಿತಿಯನ್ನೂ ಎದುರಿಸಬಲ್ಲವಳಾಗಿದ್ದಳು. ಹೀಗಾಗಿಯೇ ಮುಂದೆ ತನ್ನ ರಾಜ್ಯಕ್ಕೆದುರಾದ ಕಠಿಣ ಪರಿಸ್ಥಿತಿಯಲ್ಲಿಯೂ ತಾನು ಒಂದಿನಿತೂ ಅಳುಕದೆ ರಾಜನಿಷ್ಠರಾಗಿದ್ದ ಗುರುಸಿದ್ದಪ್ಪ, ನರಸಿಂಗರಾವ್ ಮತ್ತಿತರರ ಬೆಂಬಲದೊಡನೆ ತನ್ನ ದತ್ತು ಮೊಮ್ಮಗನಿಗೆ ಪಟ್ಟಕಟ್ಟಿದ್ದಳು. ಬಿಜಾಪುರ ಸುಲ್ತಾನರ ಪತನದ ಬಳಿಕ ಉತ್ತ...

ಅಖಂಡ_ಭಾರತ_ಸಂಕಲ್ಪ_ದಿನ_ಅಗಸ್ಟ್_14..🙏🇮🇳

Image
#ಅಖಂಡ_ಭಾರತ_ಸಂಕಲ್ಪ_ದಿನ_ಅಗಸ್ಟ್_14 ವಿಭಜನೆಯ ಬೀಜ ಸ್ವಾತಂತ್ರ್ಯಕ್ಕಿಂತ ಮುಂಚೆ, ಭಾರತ ರಾಷ್ಟ್ರೀಯವಾದಿ ಗುಂಪುಗಳ ವೈರುಧ್ಯಗಳ ಕಾರಣದಿಂದ ಬಿತ್ತಲಾಯಿತು. ಹಿಂದೂ ಬಹುಮತದಿಂದ ಮುಸ್ಲಿಮರು ಬೆದರಿದರೆ, ರಾಷ್ಟ್ರೀಯ ನಾಯಕರು ಮುಸ್ಲಿಮರನ್ನು ಓಲೈಸುವುದನ್ನು ಕಂಡು ಹಿಂದೂಗಳಿಗೆ ಅಸಮಾಧಾನ. ೧೯೦೬ರಲ್ಲಿ ಢಾಕಾದಲ್ಲಿ ಅಸ್ತಿತ್ವಕ್ಕೆ ಬಂದ ಅಖಿಲ ಭಾರತ ಮುಸ್ಲಿಂ ಲೀಗ್ ಭಾರತೀಯ ರಾಷ್ಟ್ರೀಯ #ಕಾಂಗ್ರೆಸ್ ನಿಂದ ಅಸಮಾಧಾನಗೊಂಡ ಮುಸ್ಲಿಮರು ಹುಟ್ಟುಹಾಕಿದ ಪಕ್ಷ. ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮುಂದಿಟ್ಟವರಲ್ಲಿ ಅಲ್ಲಮ ಇಕ್ಬಾಲ್ ಮೊದಲಿಗರಾಗಿದ್ದರು. ಸಿಂಧ್ ವಿಧಾನ ಪರಿಷತ್ತು ೧೯೩೫ರಲ್ಲಿ ಇಂತಹ ಒಂದು ನಿರ್ಣಯ ಕೈಗೊಂಡಿತು. ಇಕ್ಬಾಲ್ ಮತ್ತಿತರ ನಾಯಕರು ಕೊನೆಗೂ ಹಿಂದೂ-ಮುಸ್ಲಿಂ ಏಕತೆಗೆ ಹೋರಾಡುತ್ತಿದ್ದ ಮೊಹಮ್ಮದ್ ಅಲಿ ಜಿನ್ನಾರನ್ನು ತಮ್ಮತ್ತ ಸೆಳೆಯುವುದರಲ್ಲಿ ಸಫಲರಾದರು. ಇದರ ನಂತರ ಪ್ರತ್ಯೇಕತಾವಾದಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಜಿನ್ನಾ, ಹಿಂದೂ ಮತ್ತು ಮುಸ್ಲಿಮರ ವೈಪರೀತ್ಯಗಳನ್ನು ಎತ್ತಿ ತೋರಿಸಿ ಮುಸ್ಲಿಮರಿಗೆ ಪ್ರತ್ಯೇಕ ರಾಜ್ಯ ಬೇಕೆಂಬ ಕೂಗನ್ನು ಜೋರು ಮಾಡಿದರು. ಆದರೆ ಜಾತ್ಯತೀತವಾದಿಗಳಾದ ಕಾಂಗ್ರೆಸ್ ನಾಯಕರು ಧರ್ಮದ ಆಧಾರದ ಮೇಲೆ ದೇಶದ ವಿಭಜನೆಯ ಕಲ್ಪನೆಯನ್ನು ವಿರೋಧಿಸಿದರು. ಬಹು ವರ್ಷಗಳ ಕಾಲ ಮಹಾತ್ಮಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ತೊರೆಯದಂತೆ ಮನವೊಲಿಸುವ ಕಾರ್ಯದಲ್ಲ...