ಭಾರತದ_ಚರಿತ್ರೆ -1 ಬ್ರಿಟಿಷರ ನಿದ್ದೆಗೆಡಿಸಿದ ಪೈಕಾ ಕ್ರಾಂತಿಯೆಂಬ ಪುರಿಯ ಉರಿ..🙏
#ಭಾರತ_ದರ್ಶನ ಬ್ರಿಟಿಷರ ನಿದ್ದೆಗೆಡಿಸಿದ ಪೈಕಾ ಕ್ರಾಂತಿಯೆಂಬ ಪುರಿಯ ಉರಿ..🙏 ಇಂದಿಗೆ ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಪುರಿಯ ರಥಬೀದಿ ಅಕ್ಷರಶಃ ಸ್ಮಶಾನವಾಗಿತ್ತು. ಜಗನ್ನಾಥ ಮಂದಿರದ ಐವತ್ತಕ್ಕೂ ಹೆಚ್ಚು ಅರ್ಚಕರ ಶವಗಳು ದೇಗುಲದ ಎದುರಿನ ಬೀದಿಯಲ್ಲಿ ಬೇಸಗೆಯ ಬಿರು ಬಿಸಿಲಿಗೆ ಒಣಗುತ್ತಿದ್ದವು. ಪೈಕ ಸರದಾರರ ಶವಗಳನ್ನು ಸಾರ್ವಜನಿಕ ಪ್ರದರ್ಶನಕ್ಕಿಡಲಾಗಿತ್ತು. ಪೈಕ ಯೋಧರ ಮಕ್ಕಳ ಶವಗಳೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪೈಕಾಗಳನ್ನು ಒಡಿಶಾದಿಂದ ಬಹಿಷ್ಕರಿಸಲಾಗಿತ್ತು. ಹಲವಾರು ಜನರನ್ನು ಬ್ರಿಟನ್ನಿನ ತೋಟಗಳಿಗೆ ಗುಲಾಮರಂತೆ ದುಡಿಸಲು ರವಾನಿಸಲಾಗಿತ್ತು. ಇಡಿಯ ಒಡಿಶಾದ ಮನೆಮನೆಗಳಲ್ಲಿ ದುಃಖ ಮಡುಗಟ್ಟಿತ್ತು. ಒಂದೊಂದು ಮನೆಯಲ್ಲೂ ಒಂದೋ ಮನೆಯ ಸದಸ್ಯರೊಬ್ಬರು ಕೊಲೆಯಾಗಿದ್ದರು ಅಥವಾ ದೇಶಭೃಷ್ಟರಾಗಿದ್ದರು. ಪುರಿಯ ಜಗನ್ನಾಥ ಅಸಹಾಯಕನಾಗಿ ದೇಗುಲದೊಳಗೆ ಬಂಧಿಯಾಗಿದ್ದ! ಬ್ರಿಟಿಷರು ಭಾರತದಲ್ಲಿ ಯಾವುದೇ ಕ್ರೌರ್ಯ ತೋರಲಿಲ್ಲ ಎನ್ನುವವರಿಗೆ ಇತಿಹಾಸದ ಈ ತಿಂಗಳು, ಒಡಿಶಾದ ಬೀದಿಬೀದಿಗಳು ಕ್ರೌರ್ಯದ ಪರಾಕಾಷ್ಠೆಯ ಸಾಕ್ಷಿಯಾಗಿ ನಿಂತಿದ್ದವು. ಭಾರತದ ಇತಿಹಾಸದ ಘಟನೆಗಳು ಉದ್ದೇಶಪೂರ್ವಕವಾಗಿಯೇ ಮುಚ್ಚಲ್ಪಟ್ಟಿವೆ. ಬ್ರಿಟಿಷರು ತಮ್ಮ ಸ್ವಂತ ಲಾಭಕ್ಕೆಂದೇ ಆರಂಭಿಸಿದ ರೈಲ್ವೇ, ಅಂಚೆ-ತಂತಿ, ಉದ್ಯಮ, ಕೆಲ ಸುಧಾರಣೆಗಳನ್ನೇ ಘನವಾಗಿ ಪ್ರತಿಪಾದಿಸುವ ಆಷಾಢಭೂತಿ ಇತಿಹಾಸಕಾರರಿಗೆ ಭಾರತೀಯರ ಸ್ವಾತಂತ್ರ್ಯದ ಉತ್ಕಟೇಚ್ಛೆ, ...