Posts

Showing posts from October, 2019

ನಡೆದಾಡುವ ವಿಶ್ವಕೋಶ, ಮೂಕಜ್ಜಿಯ ಕನಸುಗಳ ಮೂಲಕ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ, ಕನ್ನಡಿಗರ ಹೆಮ್ಮೆಯ "ಕಡಲ ತಡಿಯ ಭಾರ್ಗವ" ಡಾ. ಕೆ #ಶಿವರಾಮ_ಕಾರಂತ ರವರ ಜನ್ಮ ದಿನ 😍💐

Image
ನಡೆದಾಡುವ ವಿಶ್ವಕೋಶ, ಮೂಕಜ್ಜಿಯ ಕನಸುಗಳ ಮೂಲಕ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ, ಕನ್ನಡಿಗರ ಹೆಮ್ಮೆಯ "ಕಡಲ ತಡಿಯ ಭಾರ್ಗವ" ಡಾ. ಕೆ #ಶಿವರಾಮ_ಕಾರಂತ ರವರ ಜನ್ಮ ದಿನದಂದು, ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಸೇವೆಯನ್ನು ಸ್ಮರಿಸುತ್ತಾ ನನ್ನ ನಮನಗಳನ್ನು ಸಲ್ಲಿಸೋಣ.. 😍🙏💐 ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧0-೧0-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದರು. ಚಲನಚಿತ್ರ ಮಾಡಿದರು, ಯಕ್ಷಗಾನ ಪ್ರಯೋಗಗಳನ್ನು ನಡೆಸಿದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದರು. ಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ...

ಭಾರತದ ಚರಿತ್ರೆ -2 ಹುತಾತ್ಮನನ್ನು ಜೀವಂತವಾಗಿಸಿದ ಆ ಎಪ್ಪತ್ತೆರಡು ಘಂಟೆಗಳು.!!

Image
ಹುತಾತ್ಮನನ್ನು ಜೀವಂತವಾಗಿಸಿದ ಆ ಎಪ್ಪತ್ತೆರಡು ಘಂಟೆಗಳು! #ಜಸ್ವಂತ್_ಸಿಂಗ್ ಯಾರೂ ಇಲ್ಲ ಅಲ್ಲಿ ಎಂಬ ಮಾಹಿತಿ ಪಡೆದು, ಇನ್ನೇನು ಭಾರತದ ಈ ಭೂಭಾಗ ಅನಾಯಾಸವಾಗಿ ತಮಗೆ ದಕ್ಕುತ್ತೆ ಅಂತ ಮುಂಬರೆದು ಬರುತ್ತಿತ್ತು ಚೀನಾ ಪಡೆ! ಗುಂಡೊಂದು ತೂರಿ ಬಂದು ಚೀನೀ ಸೈನಿಕನ ಶಿರವನ್ನು ಹೊಕ್ಕಿತು. ಆತ ಅಲ್ಲೇ ಹೆಣವಾದ. ಯಾರೂ ಇಲ್ಲದ ಮೇಲೆ ಗುಂಡೆಲ್ಲಿಂದ ಬಂತು ಎಂದು ಉಳಿದವರೆಲ್ಲಾ ಸಾವರಿಸಿಕೊಂಡು ನೋಡ ನೋಡುತ್ತಿದ್ದಂತೆ ಮತ್ತೊಬ್ಬ ಸೈನಿಕ ಬಿದ್ದಿದ್ದ. ಈ ಬಾರಿ ಗುಂಡು ಬಂದ ದಿಕ್ಕು ಬದಲಾಗಿತ್ತು. ಒಬ್ಬರ ಹಿಂದೆ ಒಬ್ಬರು ವಿವಿಧ ದಿಕ್ಕುಗಳಿಂದ ಬರುತ್ತಿದ್ದ  ಗುಂಡಿಗೆ ಬಲಿಯಾಗುತ್ತಿದ್ದಂತೆ ಭಾರತೀಯ ಸೈನಿಕರ ಪರಾಕ್ರಮದ ಬಗ್ಗೆ ಕೇಳಿ ಅರಿತಿದ್ದ 600ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಚೀನಿಯರ ಎದೆಯಲ್ಲೊಂದು ಚಳಿ ಹುಟ್ಟಿತು. ಒಟ್ಟು ಎಷ್ಟು ಜನ ಯೋಧರಿರಬಹುದು ಎನ್ನುವ ಲೆಖ್ಖವೇ ಅವರಿಗೆ ಸಿಗದಾಯಿತು. ತರಗೆಲೆಗಳಂತೆ ತಮ್ಮವರ ತಲೆಗಳುರುಳುವುದನ್ನು ಅವರು ನೋಡುತ್ತಾ ಅಸಹಾಯಕರಾಗಿ ನಿಲ್ಲಬೇಕಾಯಿತು. ಅಲ್ಲೊಂದು ಅದ್ಭುತ ಶಕ್ತಿಯಿತ್ತು; ಅದು ಅಂದೂ ಮಾತೃಭೂಮಿಗಾಗಿ ಹೋರಾಡಿತು; ಇಂದಿಗೂ ಹೋರಾಡುತ್ತಲೇ ಇದೆ. ಅರುಣಾಚಲ ಪ್ರದೇಶದ ಬಹುತೇಕ ಊರುಕೇರಿಗಳು 1962ರ ಭಾರತ-ಚೀನಾ ಯುದ್ಧಕ್ಕೆ ವೇದಿಕೆಗಳಾಗಿವೆ, ಸರಿಯಾದ ಶಸ್ತ್ರವಿಲ್ಲದೆಯೂ ಕಾದಾಡಿದ ಭಾರತೀಯ ಸೈನಿಕರ ಪರಾಕ್ರಮಕ್ಕೆ ಸಾಕ್ಷಿಗಳಾಗಿವೆ, ಯುದ್ಧ ಸ್ಮಾರಕಗಳಾಗಿವೆ....