ನಡೆದಾಡುವ ವಿಶ್ವಕೋಶ, ಮೂಕಜ್ಜಿಯ ಕನಸುಗಳ ಮೂಲಕ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ, ಕನ್ನಡಿಗರ ಹೆಮ್ಮೆಯ "ಕಡಲ ತಡಿಯ ಭಾರ್ಗವ" ಡಾ. ಕೆ #ಶಿವರಾಮ_ಕಾರಂತ ರವರ ಜನ್ಮ ದಿನ 😍💐
ನಡೆದಾಡುವ ವಿಶ್ವಕೋಶ, ಮೂಕಜ್ಜಿಯ ಕನಸುಗಳ ಮೂಲಕ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ, ಕನ್ನಡಿಗರ ಹೆಮ್ಮೆಯ "ಕಡಲ ತಡಿಯ ಭಾರ್ಗವ" ಡಾ. ಕೆ #ಶಿವರಾಮ_ಕಾರಂತ ರವರ ಜನ್ಮ ದಿನದಂದು, ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಸೇವೆಯನ್ನು ಸ್ಮರಿಸುತ್ತಾ ನನ್ನ ನಮನಗಳನ್ನು ಸಲ್ಲಿಸೋಣ.. 😍🙏💐 ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧0-೧0-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದರು. ಚಲನಚಿತ್ರ ಮಾಡಿದರು, ಯಕ್ಷಗಾನ ಪ್ರಯೋಗಗಳನ್ನು ನಡೆಸಿದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದರು. ಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ...