ಧೈರ್ಯಕ್ಕೆ ಮತ್ತೊಂದು ಹೆಸರೇ ಜನರಲ್ ತಿಮ್ಮಯ್ಯ 🇮🇳🙏
#ಧೈರ್ಯಕ್ಕೆ_ಮತ್ತೊಂದು_ಹೆಸರೇ_ಜನರಲ್_ತಿಮ್ಮಯ್ಯ ಜನರಲ್ ತಿಮ್ಮಯ್ಯರವರ ಸಾಧನೆ ಮತ್ತು ಅಂದಿನ ಸರ್ಕಾರ ಜನರಲ್ ತಿಮ್ಮಯ್ಯ ಅವರ ಜೊತೆ ನಡೆದುಕೊಂಡ ರೀತಿಯನ್ನು #ಬ್ರಿಗೇಡಿಯರ್_ಜಾನ್_ಪಿ_ದಳವಿ ಈ ರೀತಿ ವಿವರಿಸುತ್ತಾರೆ..🙏 ಅವತ್ತಿನ ತನಕ ನಿರ್ಲಕ್ಷ್ಯದಿಂದಿದ್ದು, ಉಡಾಫೆಯ ಮಾತುಗಳನ್ನಾಡುತ್ತಲೇ ಓಡಾಡಿಕೊಂಡಿದ್ದ ನೆಹರು ಇದ್ದಕ್ಕಿದ್ದಂತೆ ಭಾರತದ ಗಡಿಗಳನ್ನು ಕಾಯುವ ಕೆಲಸ ವನ್ನು ಸೇನೆಗೆ ಒಪ್ಪಿಸಿ ಬಿಟ್ಟಿದ್ದರು. ಪಾರ್ಲಿಮೆಂಟಿನಲ್ಲಿ ಅವರಿಗೆ ವಿರೋಧ ಪಕ್ಷಗಳೆದುರು ಮುಖ ಉಳಿಸಿಕೊಳ್ಳುವ ಹರಕತ್ತು ಇತ್ತು. ಬೇರಿನ್ಯಾವುದೂ ತೋಚದಿದ್ದಾಗ, ಇಡೀ ಸಮಸ್ಯೆಯನ್ನು ಸೇನೆಗೆ ಒಪ್ಪಿಸಿದ್ದೇನೆ ಎಂದು ನುಣಿಚಿಕೊಂಡು ಬಿಟ್ಟರು. ಒಬ್ಬ ಅಂತಾರಾಷ್ಟ್ರೀಯ ಮುತ್ಸದ್ದಿ ಯಾಗಿ ಬೆಳೆಯಬಯಸುತ್ತಿದ್ದ ಮಹಾನ್ ಬುದ್ಧಿವಂತ ನೆಹರೂಜಿಗೆ ಇಂಥದೊಂದು ತಪ್ಪು ಮಾಡಬಾರದೆಂದು ತೋಚಲೇ ಇಲ್ಲ. ಚೀನದ ನಾಯಕರು NEFA ದ ಸರಹದ್ದುಗಳ ತನಕ ತಮ್ಮ ಮಜಬೂತಾದ ಸೈನ್ಯವನ್ನು ತಂದು ನಿಲ್ಲಿಸಿದಾಗಲೂ ಕೂಡ ನಾವು ಸೇನೆಯನ್ನು ಬಳಸುತ್ತಿದ್ದೇವೆ ಎಂಬ ಹೇಳಿಕೆ ಕೊಟ್ಟಿರಲಿಲ್ಲ. 'ಅಲ್ಲಿ ನಮ್ಮ ಗಡಿ ರಕ್ಷಕ ಪಡೆ (Frontier guards) ಮಾತ್ರ ಇದೆ" ಎಂದು ಜಗತ್ತಿಗೆ ಸುಳ್ಳು ಹೇಳುತ್ತ ಬಂತು. ಆದರೆ ನಮ್ಮ ನೆಹರೂ ಇದ್ದಕ್ಕಿದ್ದಂತೆ "ಸೈನ್ಯಕ್ಕೆ ಗಡಿ ಕಾಯುವ ಜವಾಬ್ದಾರಿ. ಒಪ್ಪಿಸಿದ್ದೇನೆ' ಎಂದು ಹೇಳಿಕೆ ಕೊಡುವ ಮೂಲಕ ಊರಿಗೆ ಮುಂಚೆ ನಾವು ಯುದ್ಧಕ್ಕೆ ಸಿದ...