Posts

#MorbiBridgeCollapse ಗುಜರಾತ್ ನ ಮಚ್ಚು ನದಿಯ ಸುಮಾರು 140 ವರ್ಷ (1879ರ) ಹಳೆಯ ಸೇತುವೆ ನಿನ್ನೆ ಸಂಜೆ ಕುಸಿದು ಬಿದ್ದು ಸುಮಾರು 130 ಕ್ಕೂ ಅಧಿಕ ಜನರು ದುರ್ಮರಣ ಹೊಂದಿದ

#MorbiBridgeCollapse ಗುಜರಾತ್ ನ ಮಚ್ಚು ನದಿಯ ಸುಮಾರು 140 ವರ್ಷ (1879ರ) ಹಳೆಯ ಸೇತುವೆ ನಿನ್ನೆ ಸಂಜೆ ಕುಸಿದು ಬಿದ್ದು ಸುಮಾರು 130 ಕ್ಕೂ ಅಧಿಕ ಜನರು ದುರ್ಮರಣ ಹೊಂದಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.. ಈ ಸೇತುವೆಯನ್ನು ದುರಸ್ತಿಗಾಗಿ ಸುಮಾರು 7 ತಿಂಗಳ ಕಾಲ ಮುಚ್ಚಲಾಗಿತ್ತು ಮತ್ತು ಮೊನ್ನೆ ದೀಪಾವಳಿಯ ಎರಡು ದಿನಗಳ ನಂತರ ದುರಸ್ತಿಗೊಳಿಸಿ ಮತ್ತೆ ತೆರೆಯಲಾಗಿತ್ತು... ಈ ಘಟನೆಗೆ ಸರ್ಕಾರಗಳೇ ಕಾರಣ..... 1. 100 ಸಾಮರ್ಥ್ಯದ ಸೇತುವೆಯ ಮೇಲೆ 400 ಜನರನ್ನು ಏಕೆ ಅನುಮತಿಸಲಾಯಿತು? 2. ಒಂದು ಸೇತುವೆ ದುರಸ್ತಿಗೊಂಡ ನಂತರ ಅದರ ಸಾಮರ್ಥ್ಯ (capacity) ಎಷ್ಟು ಎಂದು ಅದನ್ನು ದುರಸ್ತಿಗೊಳಿಸಿದ ಟೆಂಡರ್ ಪಡೆದುಕೊಂಡ ಒರೆವಾ ಗ್ರೂಪ್‌ ಟೆಂಡರ್ ಅವರು ತಿಳಿಸಿ. ಅದರ ಮಾಹಿತಿಯಂತೆ ಟಿಕೆಟ್ ಪಡೆದುಕೊಳ್ಳುವವರು ಅಷ್ಟೇ ಜನರನ್ನು ಬಿಡಬೇಕಿತ್ತು.. 2. ಈಗ ಸರ್ಕಾರಗಳು ತನ್ನ ತಪ್ಪನ್ನು ತಳ್ಳಿ ಹಾಕಲು ಸೇತುವೆ ಪುನಾರಂಭಕ್ಕೆ ಸರ್ಕಾರದ ಅನುಮತಿಯೇ ಪಡೆದಿಲ್ಲ ಎಂದು ಹೇಳುತ್ತಿದೆ. ಇದು ಒಂಥರಾ ಅಸಯ್ಯ ಅನಿಸುವುದಿಲ್ಲವೇ....??  ಅನುಮತಿ ಪಡೆದ ಇಲ್ಲ ಅಂತಾ ಆದರೆ 400 + ಜನ ಹೋಗುವವರೆಗೂ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಅದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಏನು ಮಾಡುತ್ತಿದ್ದರು...?? ಹಾಗಾದರೆ ಸುಮಾರು 130 ಕ್ಕೂ ಅಧಿಕ ಜನರ ಸಾವಿಗೆ ಬೆಲೆಯೇ ಇಲ್ಲವೇ...? ಅಂದು ಬಂಗಾಳದಲ್ಲಿ ನಡೆದ ಫ್ಲೈಓವರ್ ಕುಸಿತದ ಸಂದರ್ಭದಲ್ಲಿ ಇದೇ ನಮ್ಮ ದೇಶದ ಪ್ರ...

ಪೊಗರು

ಪೊಗರು ಚಿತ್ರದ ವಿವಾದದ ಸುತ್ತಾ, ಭೌದ್ಧಿಕ ಗುಲಾಮಗಿರಿ ಕಳಚುವ ಸುಸಂದರ್ಭ..!! ಚಿತ್ರದಲ್ಲಿ ವಿವಾದವಾಗಿರುವ ಒಂದೊಂದೇ ವಿಷಯಗಳನ್ನು ನೋಡೋಣಾ:- ಯಜ್ಞಮಾಡುತ್ತಿರುವ ಪುರೋಹಿತನ ಹೆಗಲ ಮೇಲೆ ಕಾಲಿಟ್ಟ ಎಂಬುದು..!! ಕಾರಣ:- ಯಜ್ಞ-ಯಾಗ ಎಂಬುದು ಲೋಕಕಲ್ಯಾಣಾರ್ಥ, ಅದನ್ನು ಮಾಡುವವರು ಲೋಕಹಿತ ಬಯಸುವವರು ಎಂಬುದು. ರಿಯಾಲಿಟಿ:- ಲೋಕಕಲ್ಯಾಣಾರ್ಥ ಮಾಡುವ ಬಹುಮುಖ್ಯ ಯಾಗಗಳು ಎರಡೇ, "ರಾಜಸೂಯ", " ಅಶ್ವಮೇಧ". ಉಳಿದವು ತಮ್ಮತಮ್ಮ ಅಭಿಷ್ಟೇಗೆ ಮಾಡಿಸುವಂಥಹುವು. ಇನ್ನು ಯಜ್ಞ-ಯಾಗಗಳು ವ್ಯಾವಹಾರಿಕವಾಗಿ ಬಹಳ ಕಾಲವಾಗಿದೆಯಲ್ಲಾ? ಉದಾಹರಣೆಗೆ ಪ್ರಳಯಕಾಲ ಎಂಬ ಭ್ರಮೆ 2012 ರಲ್ಲಿ ಉಂಟಾಗಿದ್ದ ಸಂದರ್ಭದಲ್ಲಿ ಬಹಳಷ್ಟು ಜನರು "ಪ್ರಳಯಕಾಲದ ರುದ್ರಯಾಗ" ಮಾಡಿ ಜಗತ್ತನ್ನು ಕಾಪಾಡುತ್ತೇವೆ ಎಂಬ "ಬೃಹತ್ ಬ್ರಹ್ಮಾಂಡ" ನಾಟಕಗಳನ್ನು ಟಿವಿಯಲ್ಲಿ ಬಹಳಕಾಲ ನೋಡಿದೆವಲ್ಲಾ..!! ಕಾಲಿಟ್ಟದ್ದು ತಪ್ಪಾಗಿದೆ ಎಂದು, ಅಸಲಿ ಕಾರಣ ಆ ಕಲಾವಿದರೂ ಸಹ ನಿಜ ಬ್ರಾಹ್ಮಣರೇ ಅಗಿದ್ದಾರೆ. ಪ್ರಣಯಮೂರ್ತಿ, ಶಂಕರ್ ಅಶ್ವತ್ಥ್ ಅವರು. ಅದೂ ಸಮಸ್ಯೆ, ಇಂದು ಬ್ರಾಹ್ಮಣ ಪಾತ್ರಧಾರಿಗಳ ಮೇಲೆ ಕಾಲಿಟ್ಟವರು ಮುಂದೆ ಬ್ರಾಹ್ಮಣರಿಗೆ ಗೌರವ ಕೊಡುವರೇ ಎಂಬುದು, ಏಕೆಂದರೆ ಶತಶತಮಾನಗಳಿಂದ "ಬ್ರಾಹ್ಮಣರಿಗೆ ಅಗೌರವ ತೋರಿಸುವುದು ಗೋಹತ್ಯೆಗೆ ಸಮ, ಶಾಪಕ್ಕೆ ಗುರಿಯಾಗಬೇಕಾಗುತ್ತದೆ. ಬ್ರಾಹ್ಮಣರಿಗೆ ಕಾಲುತಾಗಿಸುವುದು ಬ್ರಹ್ಮ ಹತ್ಯೆಗೆ ಸಮ...

ಶ್ರೀ_ಆದಿ_ಶಂಕರಾಚಾರ್ಯರ_ಜಯಂತಿಯ_ಶುಭಾಶಯಗಳು..😍💐🙏

Image
ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ತಾವು ಬದುಕಿದ್ದು ಕೇವಲ 32 ವರ್ಷಗಳಷ್ಟೇ ಆದರೂ ಆದಿ ಶಂಕರರು ತಾವು ಮಾಡಿದ ಕಾರ್ಯ, ಗಳಿಸಿದ ಕೀರ್ತಿ , ಅಪಾರವಾದುದು. ಶ್ರೀಮದ್ಭಗವದ್ಗೀತೆ, ಉಪನಿಷತ್ತುಗಳು, ಬ್ರಹ್ಮಸೂತ್ರಗಳಿಗೆ ಭಾಷ್ಪಗಳನ್ನು ಬರೆದ ಮೊದಲಿಗರು ಶ್ರೀಶಂಕರಾಚಾರ್ಯರು. ಶಂಕರಾಚಾರ್ಯರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು. ಇವರು ಯಾವೊಂದು ಹೊಸತಾದ ಮತ, ಪಂಥಗಳನ್ನು ಸ್ಥಾಪಿಸಿಲ್ಲವಾದರೂ ಹಿಂದೂ ಧರ್ಮದಲ್ಲಿನ ವೇದಸಂಪ್ರದಾಯವನ್ನೇ ಎತ್ತಿಹಿಡಿದರು. ವೇದಗಳಲ್ಲಿನ ಸತ್ವವನ್ನೂ, ಸಾರವನ್ನು ತಮ್ಮದೇ ಆದ ನೆಲೆಯಲ್ಲಿ ನಿಷ್ಕರ್ಷಿಸುವ ಮೂಲಕ ಜಗತ್ತಿಗೆ ಪ್ರಕಾಶಪಡಿಸಿದವರು ಆಚಾರ್ಯ ಶಂಕರರು ಎಂದರೆ ತಪ್ಪಾಗಲಾರದು.  ಅದು ಎಂಟು-ಒಂಭತ್ತನೇ ಶತಮಾನಗಳ ಮಧ್ಯದ ಅವಧಿ. ಭಾರತ ದಕ್ಷಿಣ ಸಮುದ್ರ ತೀರದ ಕೇರಳ ರಾಜ್ಯದ ಕಾಲಟಿ ಎಂಬೊಂದು ಸಣ್ಣ ಹಳ್ಳಿ. ಆ ಹಳ್ಳಿಯಲ್ಲಿ ಶಿವಗುರು ಹಾಗೂ ಆರ್ಯಾಂಬರೆನ್ನುವ ಬಡ ಬ್ರಾಹ್...

ಪಂಜಾಬ್ ನ ಕೇಸರಿ,ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯಹೋರಾಟಗಾರ,ಕ್ರಾಂತಿಕಾರಿ #ಲಾಲ್_ಲಜಪತ್_ರಾಯ್ ರವರ 155 ನೇ ಜನ್ಮದಿನದ ಶುಭಾಶಯಗಳು..😍🙏💐

Image
ಪಂಜಾಬ್ ನ ಕೇಸರಿ,ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯಹೋರಾಟಗಾರ,ಕ್ರಾಂತಿಕಾರಿ #ಲಾಲ್_ಲಜಪತ್_ರಾಯ್ ರವರ 155 ನೇ ಜನ್ಮದಿನದ ಶುಭಾಶಯಗಳು..😍🙏💐 ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲು ಕ್ರಾಂತಿಕಾರಿ ಹೋರಾಟದ ಹಾದಿ ತುಳಿದ ಪ್ರಮುಖರಲ್ಲಿ ಲಾಲಾ ಲಜಪತ್ ರಾಯ್ ಒಬ್ಬರು. ಪಂಜಾಬ್ ಕೇಸರಿ ಎಂದೇ ಖ್ಯಾತರಾಗಿದ್ದ ಇವರು ಬ್ರಿಟಿಷರ ವಿರುದ್ಧ ಹೋರಾಡಲು ಮತ್ತು ಯುವಕರಲ್ಲಿ ರಾಷ್ಟ್ರಪ್ರೇಮ ಮೂಡಿಸಲು ತಮ್ಮ ಪ್ರಖರ ಮಾತಿನ ಮೂಲಕವೇ ಕ್ರಾಂತಿಯ ಕಿಚ್ಚು ಹಚ್ಚಿದರು. ಈ ಭೂಮಿ ಮೇಲೆ ಚೆಲ್ಲಿರುವುದು ನಮ್ಮ ಪೂರ್ವಜರ ರಕ್ತ. ನಾವು ಈ ಭೂಮಿಯನ್ನು ಬಳಸುತ್ತಿದ್ದೇವೆ. ಅದರ ಮೇಲೆ ವಾಸಿಸುತ್ತಿದ್ದೇವೆ. ಆದ್ದರಿಂದ ಈ ಭೂಮಿ ನಮ್ಮದು ಇಲ್ಲವೇ ದೇವರದ್ದು…’ ಹೀಗೆ ತಮ್ಮ ಪ್ರಖರ ಮಾತುಗಳ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚು ಹಚ್ಚಿದವರು ಅಪ್ರತಿಮ ವೀರ ಲಾಲಾ ಲಜಪತ್​ರಾಯ್. ಲಾಲ್-ಬಾಲ್-ಪಾಲ್ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಅವಲೋಕಿಸಿದಾಗ ಒಟ್ಟಿಗೆ ಕಾಣಿಸಿಕೊಳ್ಳುವ ಹೆಸರುಗಳು. ಲಾಲ್ ಎಂದರೆ ಲಾಲಾ ಲಜಪತರಾಯ್, ಬಾಲ್ ಎಂದರೆ ಬಾಲ ಗಂಗಾಧರ ತಿಲಕ್, ಪಾಲ್ ಎಂದರೆ ಬಿಪಿನ್ ಚಂದ್ರಪಾಲ್. ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಮಂದಗತಿಯಲ್ಲಿ ಸಾಗುತ್ತಿದ್ದ ಹೋರಾಟದ ದಿಕ್ಕನ್ನು ಬದಲಿಸಿದ ಈ ಯುವಕರು ಕ್ರಾಂತಿಕಾರಿ ಹೋರಾಟದಿಂದಷ್ಟೇ ಸ್ವರಾಜ್ಯದ ಕನಸು ನನಸ...

ಧೈರ್ಯಕ್ಕೆ ಮತ್ತೊಂದು ಹೆಸರೇ ಜನರಲ್ ತಿಮ್ಮಯ್ಯ 🇮🇳🙏

Image
#ಧೈರ್ಯಕ್ಕೆ_ಮತ್ತೊಂದು_ಹೆಸರೇ_ಜನರಲ್_ತಿಮ್ಮಯ್ಯ ಜನರಲ್ ತಿಮ್ಮಯ್ಯರವರ ಸಾಧನೆ ಮತ್ತು ಅಂದಿನ ಸರ್ಕಾರ ಜನರಲ್ ತಿಮ್ಮಯ್ಯ ಅವರ ಜೊತೆ ನಡೆದುಕೊಂಡ ರೀತಿಯನ್ನು #ಬ್ರಿಗೇಡಿಯರ್_ಜಾನ್_ಪಿ_ದಳವಿ ಈ ರೀತಿ ವಿವರಿಸುತ್ತಾರೆ..🙏 ಅವತ್ತಿನ ತನಕ ನಿರ್ಲಕ್ಷ್ಯದಿಂದಿದ್ದು, ಉಡಾಫೆಯ ಮಾತುಗಳನ್ನಾಡುತ್ತಲೇ ಓಡಾಡಿಕೊಂಡಿದ್ದ ನೆಹರು ಇದ್ದಕ್ಕಿದ್ದಂತೆ ಭಾರತದ ಗಡಿಗಳನ್ನು ಕಾಯುವ ಕೆಲಸ ವನ್ನು ಸೇನೆಗೆ ಒಪ್ಪಿಸಿ ಬಿಟ್ಟಿದ್ದರು. ಪಾರ್ಲಿಮೆಂಟಿನಲ್ಲಿ ಅವರಿಗೆ ವಿರೋಧ ಪಕ್ಷಗಳೆದುರು ಮುಖ ಉಳಿಸಿಕೊಳ್ಳುವ ಹರಕತ್ತು ಇತ್ತು. ಬೇರಿನ್ಯಾವುದೂ ತೋಚದಿದ್ದಾಗ, ಇಡೀ ಸಮಸ್ಯೆಯನ್ನು ಸೇನೆಗೆ ಒಪ್ಪಿಸಿದ್ದೇನೆ ಎಂದು ನುಣಿಚಿಕೊಂಡು ಬಿಟ್ಟರು. ಒಬ್ಬ ಅಂತಾರಾಷ್ಟ್ರೀಯ ಮುತ್ಸದ್ದಿ ಯಾಗಿ ಬೆಳೆಯಬಯಸುತ್ತಿದ್ದ ಮಹಾನ್ ಬುದ್ಧಿವಂತ ನೆಹರೂಜಿಗೆ ಇಂಥದೊಂದು ತಪ್ಪು ಮಾಡಬಾರದೆಂದು ತೋಚಲೇ ಇಲ್ಲ. ಚೀನದ ನಾಯಕರು NEFA ದ ಸರಹದ್ದುಗಳ ತನಕ ತಮ್ಮ ಮಜಬೂತಾದ ಸೈನ್ಯವನ್ನು ತಂದು ನಿಲ್ಲಿಸಿದಾಗಲೂ ಕೂಡ ನಾವು ಸೇನೆಯನ್ನು ಬಳಸುತ್ತಿದ್ದೇವೆ ಎಂಬ ಹೇಳಿಕೆ ಕೊಟ್ಟಿರಲಿಲ್ಲ. 'ಅಲ್ಲಿ ನಮ್ಮ ಗಡಿ ರಕ್ಷಕ ಪಡೆ (Frontier guards) ಮಾತ್ರ ಇದೆ" ಎಂದು ಜಗತ್ತಿಗೆ ಸುಳ್ಳು ಹೇಳುತ್ತ ಬಂತು. ಆದರೆ ನಮ್ಮ ನೆಹರೂ ಇದ್ದಕ್ಕಿದ್ದಂತೆ "ಸೈನ್ಯಕ್ಕೆ ಗಡಿ ಕಾಯುವ ಜವಾಬ್ದಾರಿ. ಒಪ್ಪಿಸಿದ್ದೇನೆ' ಎಂದು ಹೇಳಿಕೆ ಕೊಡುವ ಮೂಲಕ ಊರಿಗೆ ಮುಂಚೆ ನಾವು ಯುದ್ಧಕ್ಕೆ ಸಿದ...

ಓಂ ಪ್ರಕಾಶ್ ಯಾದವ್ ವಿಶ್ವಕ್ಕೆ ಸ್ಪೂರ್ತಿದಾಯಗುವ ಬಾಲಕ..😍🙏

Image
#ಓಂ_ಪ್ರಕಾಶ್_ಯಾದವ್ 🧡 ಏಳನೇ ತರಗತಿಯಲ್ಲಿ ಓದುತ್ತಿದ್ದ ಉತ್ತರಪ್ರದೇಶದ ರೈತನ ಮಗ. ವ್ಯಾನ್ ವೊಂದಕ್ಕೆ ಬೆಂಕಿ ಬಿದ್ದಾಗ ಮಕ್ಕಳನ್ನು ರಕ್ಷಿಸಿ ಸಂಜಯ ಚೋಪ್ರ ಅವಾರ್ಡ ಗೆದ್ದರು. ಮತ್ತು 2011ರಲ್ಲಿ ರಾಷ್ಟ್ರದ ಧೈರ್ಯಶಾಲಿ ಪ್ರಶಸ್ತಿ ಗೆದ್ದ ಹುಡುಗ..😍🙏 ಅಂದು ಸೆಪ್ಟಂಬರ್ 11, 2010. ತನ್ನ ಸ್ನೇಹಿತರ ಜೊತೆ ಮಾರುತಿ ಕಾರ್ ನಲ್ಲಿ ಶಾಲೆಗೆ ಹೋಗುತ್ತಿದ್ದ. ಆದರೆ ಆಕಸ್ಮಿಕವಾಗಿ ಮಾರುತಿ ಕಾರಿಗೆ ಬೆಂಕಿ ಹೊತ್ತಿತು. ಕಾರಣವಿಷ್ಟೆ ಗ್ಯಾಸ್'ಕಿಟ್ ನಲ್ಲಿನ ಶಾರ್ಟಸರ್ಕ್ಯೂಟ್ !!! ತಕ್ಷಣ ಮಾರುತಿ ಕಾರಿನ ಡೋರ್ ತೆಗೆದು ಚಾಲಕ ಪಲಾಯನ ಗೈದ. ಆದರೆ ಯಾದವ್ ಹಾಗೆ ಮಾಡಲಿಲ್ಲ. ಬದಲಾಗಿ ತನ್ನ ಬಳಿಯಿದ್ದ ಡೋರ್ ಮುರಿದ,ಬಾಗಿಲು ತೆರೆದ, ತನ್ನ ಸ್ನೇಹಿತರನ್ನು ಒಬ್ಬೊಬ್ಬರನ್ನಾಗಿ ಹೊರಗೆ ಎಳೆದು ಹಾಕಿ, ಯಾದವ್ ಆ ಹೊತ್ತಿನಲ್ಲಿ ತನ್ನ ಎಂಟು ಜನ ಸಹಪಾಠಿಗಳನ್ನು ರಕ್ಷಿಸಿದ್ದ. ಆಗಲೆ ಬೆಂಕಿ ಅವನ ಮುಖ ಬೆನ್ನು ತೋಳುಗಳನ್ನು ಬೇಯಿಸಿಬಿಟ್ಟಿತು. ಅಷ್ಟಾಗಿಯೂ ಅವನ ಮುಖದಲ್ಲಿ ಭಯ ಕಾಣುತ್ತಿರಲಿಲ್ಲ.ಬದಲಾಗಿ ಅವನ ಮುಖದ ಸುಟ್ಟಗಾಯಗಳು ನೋಡಿದವರನ್ನು ಭಯಬೀಳಿಸುತ್ತಿತ್ತು. ಅವನ ಆತ್ಮಸ್ಥೈರ್ಯ ಒಂದಿಂಚು ಕುಸಿದಿರಲಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೆ ಒಂದು ವರ್ಷ ಶಾಲೆಯಿಂದ ದೂರ ಕೂಡ ಉಳಿಯಬೇಕಾದ ಪರಿಸ್ಥಿತಿ ಎದುರಾಯಿತು..😔 ಸಂದರ್ಶಕನೊಬ್ಬ ಘಟನೆಯ ಬಗ್ಗೆ ಕೇಳಿದ್ದಕ್ಕೆ ಹೀಗೆ ಹೇಳಿದ "ನನಗೆ ನನ್ನ ಮೈ ಸುಟ್ಟುಹೋದ ಅನುಭವ ಆಗುತ...

ನಡೆದಾಡುವ ವಿಶ್ವಕೋಶ, ಮೂಕಜ್ಜಿಯ ಕನಸುಗಳ ಮೂಲಕ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ, ಕನ್ನಡಿಗರ ಹೆಮ್ಮೆಯ "ಕಡಲ ತಡಿಯ ಭಾರ್ಗವ" ಡಾ. ಕೆ #ಶಿವರಾಮ_ಕಾರಂತ ರವರ ಜನ್ಮ ದಿನ 😍💐

Image
ನಡೆದಾಡುವ ವಿಶ್ವಕೋಶ, ಮೂಕಜ್ಜಿಯ ಕನಸುಗಳ ಮೂಲಕ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ, ಕನ್ನಡಿಗರ ಹೆಮ್ಮೆಯ "ಕಡಲ ತಡಿಯ ಭಾರ್ಗವ" ಡಾ. ಕೆ #ಶಿವರಾಮ_ಕಾರಂತ ರವರ ಜನ್ಮ ದಿನದಂದು, ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಸೇವೆಯನ್ನು ಸ್ಮರಿಸುತ್ತಾ ನನ್ನ ನಮನಗಳನ್ನು ಸಲ್ಲಿಸೋಣ.. 😍🙏💐 ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧0-೧0-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದರು. ಚಲನಚಿತ್ರ ಮಾಡಿದರು, ಯಕ್ಷಗಾನ ಪ್ರಯೋಗಗಳನ್ನು ನಡೆಸಿದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದರು. ಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ...

ಭಾರತದ ಚರಿತ್ರೆ -2 ಹುತಾತ್ಮನನ್ನು ಜೀವಂತವಾಗಿಸಿದ ಆ ಎಪ್ಪತ್ತೆರಡು ಘಂಟೆಗಳು.!!

Image
ಹುತಾತ್ಮನನ್ನು ಜೀವಂತವಾಗಿಸಿದ ಆ ಎಪ್ಪತ್ತೆರಡು ಘಂಟೆಗಳು! #ಜಸ್ವಂತ್_ಸಿಂಗ್ ಯಾರೂ ಇಲ್ಲ ಅಲ್ಲಿ ಎಂಬ ಮಾಹಿತಿ ಪಡೆದು, ಇನ್ನೇನು ಭಾರತದ ಈ ಭೂಭಾಗ ಅನಾಯಾಸವಾಗಿ ತಮಗೆ ದಕ್ಕುತ್ತೆ ಅಂತ ಮುಂಬರೆದು ಬರುತ್ತಿತ್ತು ಚೀನಾ ಪಡೆ! ಗುಂಡೊಂದು ತೂರಿ ಬಂದು ಚೀನೀ ಸೈನಿಕನ ಶಿರವನ್ನು ಹೊಕ್ಕಿತು. ಆತ ಅಲ್ಲೇ ಹೆಣವಾದ. ಯಾರೂ ಇಲ್ಲದ ಮೇಲೆ ಗುಂಡೆಲ್ಲಿಂದ ಬಂತು ಎಂದು ಉಳಿದವರೆಲ್ಲಾ ಸಾವರಿಸಿಕೊಂಡು ನೋಡ ನೋಡುತ್ತಿದ್ದಂತೆ ಮತ್ತೊಬ್ಬ ಸೈನಿಕ ಬಿದ್ದಿದ್ದ. ಈ ಬಾರಿ ಗುಂಡು ಬಂದ ದಿಕ್ಕು ಬದಲಾಗಿತ್ತು. ಒಬ್ಬರ ಹಿಂದೆ ಒಬ್ಬರು ವಿವಿಧ ದಿಕ್ಕುಗಳಿಂದ ಬರುತ್ತಿದ್ದ  ಗುಂಡಿಗೆ ಬಲಿಯಾಗುತ್ತಿದ್ದಂತೆ ಭಾರತೀಯ ಸೈನಿಕರ ಪರಾಕ್ರಮದ ಬಗ್ಗೆ ಕೇಳಿ ಅರಿತಿದ್ದ 600ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಚೀನಿಯರ ಎದೆಯಲ್ಲೊಂದು ಚಳಿ ಹುಟ್ಟಿತು. ಒಟ್ಟು ಎಷ್ಟು ಜನ ಯೋಧರಿರಬಹುದು ಎನ್ನುವ ಲೆಖ್ಖವೇ ಅವರಿಗೆ ಸಿಗದಾಯಿತು. ತರಗೆಲೆಗಳಂತೆ ತಮ್ಮವರ ತಲೆಗಳುರುಳುವುದನ್ನು ಅವರು ನೋಡುತ್ತಾ ಅಸಹಾಯಕರಾಗಿ ನಿಲ್ಲಬೇಕಾಯಿತು. ಅಲ್ಲೊಂದು ಅದ್ಭುತ ಶಕ್ತಿಯಿತ್ತು; ಅದು ಅಂದೂ ಮಾತೃಭೂಮಿಗಾಗಿ ಹೋರಾಡಿತು; ಇಂದಿಗೂ ಹೋರಾಡುತ್ತಲೇ ಇದೆ. ಅರುಣಾಚಲ ಪ್ರದೇಶದ ಬಹುತೇಕ ಊರುಕೇರಿಗಳು 1962ರ ಭಾರತ-ಚೀನಾ ಯುದ್ಧಕ್ಕೆ ವೇದಿಕೆಗಳಾಗಿವೆ, ಸರಿಯಾದ ಶಸ್ತ್ರವಿಲ್ಲದೆಯೂ ಕಾದಾಡಿದ ಭಾರತೀಯ ಸೈನಿಕರ ಪರಾಕ್ರಮಕ್ಕೆ ಸಾಕ್ಷಿಗಳಾಗಿವೆ, ಯುದ್ಧ ಸ್ಮಾರಕಗಳಾಗಿವೆ....

ಭಾರತದ_ಚರಿತ್ರೆ -1 ಬ್ರಿಟಿಷರ ನಿದ್ದೆಗೆಡಿಸಿದ ಪೈಕಾ ಕ್ರಾಂತಿಯೆಂಬ ಪುರಿಯ ಉರಿ..🙏

Image
#ಭಾರತ_ದರ್ಶನ ಬ್ರಿಟಿಷರ ನಿದ್ದೆಗೆಡಿಸಿದ ಪೈಕಾ ಕ್ರಾಂತಿಯೆಂಬ ಪುರಿಯ ಉರಿ..🙏   ಇಂದಿಗೆ ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಪುರಿಯ ರಥಬೀದಿ ಅಕ್ಷರಶಃ ಸ್ಮಶಾನವಾಗಿತ್ತು. ಜಗನ್ನಾಥ ಮಂದಿರದ ಐವತ್ತಕ್ಕೂ ಹೆಚ್ಚು ಅರ್ಚಕರ ಶವಗಳು ದೇಗುಲದ ಎದುರಿನ ಬೀದಿಯಲ್ಲಿ ಬೇಸಗೆಯ ಬಿರು ಬಿಸಿಲಿಗೆ ಒಣಗುತ್ತಿದ್ದವು. ಪೈಕ ಸರದಾರರ ಶವಗಳನ್ನು ಸಾರ್ವಜನಿಕ ಪ್ರದರ್ಶನಕ್ಕಿಡಲಾಗಿತ್ತು. ಪೈಕ ಯೋಧರ ಮಕ್ಕಳ ಶವಗಳೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪೈಕಾಗಳನ್ನು ಒಡಿಶಾದಿಂದ ಬಹಿಷ್ಕರಿಸಲಾಗಿತ್ತು. ಹಲವಾರು ಜನರನ್ನು ಬ್ರಿಟನ್ನಿನ ತೋಟಗಳಿಗೆ ಗುಲಾಮರಂತೆ ದುಡಿಸಲು ರವಾನಿಸಲಾಗಿತ್ತು. ಇಡಿಯ ಒಡಿಶಾದ ಮನೆಮನೆಗಳಲ್ಲಿ ದುಃಖ ಮಡುಗಟ್ಟಿತ್ತು. ಒಂದೊಂದು ಮನೆಯಲ್ಲೂ ಒಂದೋ ಮನೆಯ ಸದಸ್ಯರೊಬ್ಬರು ಕೊಲೆಯಾಗಿದ್ದರು ಅಥವಾ ದೇಶಭೃಷ್ಟರಾಗಿದ್ದರು. ಪುರಿಯ ಜಗನ್ನಾಥ ಅಸಹಾಯಕನಾಗಿ ದೇಗುಲದೊಳಗೆ ಬಂಧಿಯಾಗಿದ್ದ! ಬ್ರಿಟಿಷರು ಭಾರತದಲ್ಲಿ ಯಾವುದೇ ಕ್ರೌರ್ಯ ತೋರಲಿಲ್ಲ ಎನ್ನುವವರಿಗೆ ಇತಿಹಾಸದ ಈ ತಿಂಗಳು, ಒಡಿಶಾದ ಬೀದಿಬೀದಿಗಳು ಕ್ರೌರ್ಯದ ಪರಾಕಾಷ್ಠೆಯ ಸಾಕ್ಷಿಯಾಗಿ ನಿಂತಿದ್ದವು. ಭಾರತದ ಇತಿಹಾಸದ ಘಟನೆಗಳು ಉದ್ದೇಶಪೂರ್ವಕವಾಗಿಯೇ ಮುಚ್ಚಲ್ಪಟ್ಟಿವೆ. ಬ್ರಿಟಿಷರು ತಮ್ಮ ಸ್ವಂತ ಲಾಭಕ್ಕೆಂದೇ ಆರಂಭಿಸಿದ ರೈಲ್ವೇ, ಅಂಚೆ-ತಂತಿ, ಉದ್ಯಮ, ಕೆಲ ಸುಧಾರಣೆಗಳನ್ನೇ ಘನವಾಗಿ ಪ್ರತಿಪಾದಿಸುವ ಆಷಾಢಭೂತಿ ಇತಿಹಾಸಕಾರರಿಗೆ ಭಾರತೀಯರ ಸ್ವಾತಂತ್ರ್ಯದ ಉತ್ಕಟೇಚ್ಛೆ, ...

ವಿದ್ಯೆ ಬುದ್ದಿ ಕಲಿಸಿದ ಗುರುವಿಗೆ ಶಿಕ್ಷಕರ ದಿನದ ಶುಭಾಷಯಗಳು.😍💐🙏

Image
#ವಿದ್ಯೆ_ಬುದ್ದಿ_ಕಲಿಸಿದ_ಗುರುವಿಗೆ_ಶಿಕ್ಷಕರ_ದಿನದ_ಶುಭಾಷಯಗಳು...💐💐🙏🏼🙏🏼 ಭಾರತದಲ್ಲಿ ಗುರು ಶಿಷ್ಯರ ಪರಂಪರೆಯ ದೊಡ್ಡ ಪಟ್ಟಿಯೇ ಇದೆ. ಯಮಧರ್ಮ-ನಚೀಕೇತ, ದ್ರೋಣಾಚಾರ್ಯ- ಆರ್ಜುನ, ಕೃಷ್ಣ-ಅರ್ಜುನ, ಚಾಣಕ್ಯ- ಚಂದ್ರಗುಪ್ತ, ರಾಮಕೃಷ್ಣ ಪರಮಹಂಸ-ಸ್ವಾಮಿ ವಿವೇಕಾನಂದ, ಗೋಪಾಲಕೃಷ್ಣಗೋಖಲೆ-ಮಹಾತ್ಮ ಗಾಂಧಿ, ಟಿ.ಎಸ್. ವೆಂಕಣ್ಣಯ್ಯ-ಕುವೆಂಪು ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. 'ತಾಯಿಯೇ ಮೊದಲ ಗುರು' ಎನ್ನುತ್ತಾರೆ. ಇದು ನಿಜ ಕೂಡ. ಮಗುವಿಗೆ ಮೊದಲು ಕೇಳಿಸುವುದು ತನ್ನಮ್ಮನ ಮಾತುಗಳೇ. ತಾಯಿಯಾದವಳು ಮಕ್ಕಳನ್ನು ಸನ್ಮಾರ್ಗದಲ್ಲಿ ಬೆಳೆಸಿದರೆ ಗುರುವಿನ ಕೆಲಸಕ್ಕೆ ಸಹಕಾರಿಯಾಗುತ್ತದೆ. ತಾಯಿಯ ಮಮತೆಯನ್ನು, ತಂದೆಯಂತೆ ಜವಾಬ್ದಾರಿಯಿಂದ ಪೋಷಣೆ ಮಾಡಬಲ್ಲವನೇ ನಿಜವಾದ ಗುರು. ಗುರುವಾದವನು ತನ್ನ ಶಿಷ್ಯನಿಗೆ ತಂದೆ-ತಾಯಿ ಎರಡೂ ಆಗಬಲ್ಲ. ಒಳ್ಳೆಯ ಮಾರ್ಗದಲ್ಲಿ ನಡೆಯುವವರು, ನಡೆದವರು,ನಡೆಯಬಯಸುವವರು ಇನ್ನಾದರೂ ತಮ್ಮ ಮಾರ್ಗದರ್ಶಕರನ್ನು ಮರೆಯದೇ ನೆನಪಿಸಿಕೊಳ್ಳುವುದು ಅಗತ್ಯ.  ಶಿಷ್ಯರ ಏಳಿಗೆಯನ್ನು ಸದಾ ಬಯಸುವ ಗುರುಗಳನ್ನು ಒಮ್ಮೆಯೂ ನೆನಪಿಸಿಕೊಳ್ಳದವನು ಮನುಷ್ಯನೇ ಅಲ್ಲಾ ಬಿಡಿ.ಭಾರತದಲ್ಲಿ ಗುರುವನ್ನು ನೆನಪಿಕೊಳ್ಳುವಂತೆ ಮಾಡಿದ ಕೀರ್ತಿ ರಾಷ್ಟ್ರಾಧ್ಯಕ್ಷರಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣರಿಗೆ ಸಲ್ಲುತ್ತದೆ. ಉದಾರ ಮನೋಭಾವನೆಯಿಂದ ತಾವು ಹುಟ್ಟಿದ ದಿನವನ್ನು (ಸೆಪ್ಟೆಂಬರ್ 5) ಶಿಕ್ಷಕರ ದಿನವೆಂದು ಆಚರಿಸಲು ತ...

ವೀರಯೋಧ ವಿಕ್ರಂ ಭಾತ್ರಾ ರ ನೆನಪು 😍🙏

Image
#ಏ_ಮೇರೆ_ವತನ್_ಕೇ_ಲೋಗೋ… #ವಿಕ್ರಂ_ಭಾತ್ರಾ 😍🙏🏼🇮🇳 ಮೊಬೈಲ್ ಪ್ಲೇ ಬ್ಯಾಕ್ನಲ್ಲಿ ಲತಾ ಮಂಗೇಶ್ಕರ್ ಹಾಡಿದ “ಏ ಮೇರೆ ವತನ್ ಕೇ ಲೋಗೊ” ಹಾಡು ಗುಯ್ ಗುಟ್ಟುತ್ತಿತ್ತು, ಅದನ್ನ ಹಾಡು ಎಂದರೆ ತಪ್ಪಾಗುತ್ತೆ, ಅದೊಂದು ಚರಮ ಗೀತೆ, ಕಾರ್ಗಿಲ್ ಕಣ್ಣೆದುರು ಬಂದು ಹೋಯ್ತು, ಗೆದ್ದು ಬೀಗಿದ್ದಕ್ಕಿಂತ, ಕಳೆದುಕೊಂಡು ಅತ್ತದ್ದೇ ಜಾಸ್ತಿ. ನಾವು ಗೆದ್ದು ಸೋತಿದ್ದೆವು, ಪಾಕಿಸ್ತಾನ ಸೋತು ಸತ್ತಿತ್ತು. ಹೀಗೆ ಹಾಡು ಕೇಳುತ್ತಿದ್ದವನಿಗೆ ನೆನಪಾದದ್ದು ಕಾರ್ಗಿಲ್ ಹೀರೋಗಳದ್ದು, ಅದರಲ್ಲೂ #ವಿಕ್ರಂ_ಭಾತ್ರಾ 🙏🏼 ಆತ ಮನಸ್ಸು ಮಾಡಿದ್ದರೆ ಹಡಗು ಹತ್ತಿ ಡಾಲರ್ ಗಟ್ಟಲೆ ದುಡಿಯಬಹುದಿತ್ತು, ವಿದೇಶಿ ಹಡಗಿನಲ್ಲಿ ಕೆಲಸವೂ ಸಿಕ್ಕಿತ್ತು, ಆದರೆ ಆತ ಹಡಗಿನ ಯುನಿಪಾರಂ ತ್ಯಜಿಸಿ ಸೇನೆಯ ಯುನಿಪಾರಂ ತೊಟ್ಟುಬಿಟ್ಟ.. ತಂದೆ ಜಿ.ಎಲ್ ಭಾತ್ರಾ ಚಂಡೀಗಡದ ಪಾಲಾಲಂಪುರದ ಸಣ್ಣ ಶಾಲೆಯೊಂದರ ಮುಖ್ಯ ಶಿಕ್ಷಕ, ತಾಯಿ ಜಯ್ ಕಮಲ್ ಶಿಕ್ಷಕಿ ಜೊತೆಗೊಬ್ಬ ಸಹೋದರ ಇವಿಷ್ಟು ಭಾತ್ರಾನ ಪ್ರಪಂಚ,ತೀರಾ ಮಧ್ಯಮ ವರ್ಗದ ಕುಟುಂಬವದು, ವಿಕ್ರಂ ಸೇನೆಗೆ ಸೇರಿ ಹದಿನೆಂಟು ತಿಂಗಳಾಗಿತ್ತಷ್ಟೆ, ಮೊದಲ ರಜೆ ಸಿಕ್ಕಿತ್ತು, ಅಮ್ಮನ ಕೈ ತುತ್ತು ತಿನ್ನಬೇಕು,ಅಪ್ಪ,ತಮ್ಮನ ಜೊತೆ ಹರಟಬೇಕು ಎಂದು ಆಸೆಯಿಂದ ಮನೆಗೆ ಬಂದಿದ್ದ, ಹೋಳಿ ಹಬ್ಬದ ಸಂದರ್ಭ ಪಾಲಾಲಂಪುರದಲ್ಲಿ ನೇವುಗಲ್ ಕಫೇ ಎಂಬ ಹೋಟೆಲ್ ಇದೆ,ಅದ್ಯಾವುದೋ ಕೆಲಸಕ್ಕೆ ಹೋದಾತನಿಗೆ ಪರಿಚಯಸ್ಥನೊಬ್ಬ ಸಿಕ್ಕಿದ್ದ, “ಯುದ್ಧ ಪ್ರಾರ್...

ಸ್ವಾತಂತ್ರ್ಯ_ಯಾರಿಂದ_ಬಂತು.. #ಮಂಗಳ್_ಪಾಂಡೆ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ಮಂಗಳ್_ಪಾಂಡೆ (ದಿ. ೮ ಎಪ್ರಿಲ್ ೧೮೫೭) ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮ ಎಂದೇ ಪ್ರಖ್ಯಾತರು. ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು. ೧೯೫೭ಲ್ಲಿ ಬ್ರಿಟಿಷರ ಮೇಲೆ ಮಾಡಿದ ಆಕ್ರಮಣವು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ರೂಪವನ್ನು ಪಡೆಯಿತು.ಅವರು ವ್ಯಾಪಕವಾಗಿ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರರು ಎಂದು ಕರೆಯಲಾಗುತ್ತದೆ. ಭಾರತ ಸರ್ಕಾರ ವಿಶಿಷ್ಠ ಸ್ವಾತಂತ್ರ್ಯ ಹೋರಾಟಗಾರ ಎಂದು ಸ್ಮರಣೆಗಾಗಿ ಭಾರತೀಯ ಅಂಚೆ ಚೀಟಿಯ ಜಾರಿ ಮಾಡಿದೆ. ಮೀರಿದ ಅವರ ಜೀವನ ಮತ್ತು ಕ್ರಿಯೆಗಳನ್ನು ಬೆಳ್ಳಿ ತೆರೆಗೆ ಮಾರ್ಪಡಿಸಲಾಗಿದೆ. ಮಂಗಲ ಪಾಂಡೆ - ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಆರಂಭಿಕ ವರ್ಷಗಳಲ್ಲಿ ಮಂಗಲ್ ಪಾಂಡೆ ಒಂದು ಭೂಮಿಹಾರ್ ಬ್ರಾಹ್ಮಣ ಕುಟುಂಬಕ್ಕೆ ಭಾರತದ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ, ನಾಗವ ಹಳ್ಳಿಯಲ್ಲಿ ಜುಲೈ ೧೮೨೭ ೧೯ ರಂದು ಜನಿಸಿದರು. ಅವರ ತಂದೆ, ದಿವಾಕರ್ ಪಾಂಡೆ, ವೃತ್ತಿಯ ಮೂಲಕ ರೈತ ಮತ್ತು ಮಧ್ಯಮ ವರ್ಗ ಸೇರಿದ್ದರು. ಮಂಗಲ್ ಪಾಂಡೆ, ನಂತರ ೧೮೩೦ ರಲ್ಲಿ ಬರಗಾಲದಿಂದ ಅವರ ತಂದೆ ಮಂಗಲ್ ಪಾಂಡೆ ಹಾಗೂ ಅವರ ಸಹೋದರಿಯನ್ನು ಬಿಟ್ಟು ಮೃತಪಟ್ಟರು. ಅವರು ೨೨ನೇ ವಯಸ್ಸಿನಲ್ಲಿ ೧೮೪೯ ರಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೇರಿದರು. ಪಾಂಡೆ ೩೪ ನೇ ಬಂಗಾಳ ಸ್ಥಳೀಯ ಪದಾತಿದಳದ ೬ ನೇ ಕಂಪನಿ ಭಾಗವಾಗಿದ್ದರು , ಪ್ರಮುಖವಾಗಿ ರೆಜಿಮೆಂಟ್ ತಂದೆಯ...

ಸ್ವಾತಂತ್ರ್ಯ_ಯಾರಿಂದ_ಬಂತು... ಚಂದ್ರಶೇಖರ್ ಆಜಾದ್ 🙏🙏

Image
#ಸುಮ್ಮನೆ_ಬರಲಿಲ್ಲ_ಸ್ವಾತಂತ್ರ್ಯ ವಾರಣಾಸಿಯ ಬೀದಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತಚಲನ ನಡೆದಿತ್ತು. ಹನ್ನೆರಡನೆ ವಯಸ್ಸಿಗಾಗಲೇ ಭಾರತ ಮಾತೆಯನ್ನು ಸ್ವತಂತ್ರ್ಯಗೊಳಿಸಬೇಕೆಂಬ ಹಂಬಲದಲ್ಲಿದ್ದ ಹುಡುಗನೊಬ್ಬ ಚಳುವಳಿಗಾರರ ಆಗಮನವನ್ನು ದೂರದಿಂದಲೇ ನೋಡುತ್ತ, ಕಾತರನಾಗಿ ಕಾಯುತ್ತಿದ್ದ. ಆ ಗುಂಪು ಹತ್ತಿರ ಬರುತ್ತಿದ್ದಂತೆ ತಾನೂ ಅವರಲ್ಲೊಂದಾಗಿ ನಡೆದ. “ಬೋಲೋ ಭಾರತ್ ಮಾತಾ ಕೀ?.. ಜೈ!" “ವಂದೇ... ಮಾತರಂ!" ಹದಿನೈದಿಪ್ಪತ್ತು ಹೆಜ್ಜೆ ಸರಿದಿರಬೇಕು? ಪೋಲಿಸರ ದಂಡು ಎದುರಾಯಿತು. ಘೋಷಣೆಗಳನ್ನು ಕೂಗುತ್ತ ಸಾಗುತ್ತಿದ್ದ ಚಳುವಳಿಗಾರರನ್ನು ಮನಬಂದಂತೆ ಥಳಿಸಿದರು. ಎಂಭತ್ತಕ್ಕು ಹೆಚ್ಚು ವಯಸ್ಸಿನ ವೃದ್ಧರೊಬ್ಬರ ಎದೆ ಮೇಲೆ ಒಬ್ಬ ಪೋಲಿಸ್ ಲಾಠಿ ಬೀಸಿದ. ಇದನ್ನು ನೋಡಿ ಕೋಪಗೊಂಡ ಹುಡುಗ ಅಲ್ಲೇ ಕಾಲಬುಡದಲ್ಲಿ ಬಿದ್ದಿದ್ದ ಒಂದು ಕಲ್ಲನ್ನು ತೆಗೆದುಕೊಂಡು ಬೀಸಿದ, ಕಲ್ಲು ನೇರವಾಗಿ ಹೋಗಿ ಆ ಪೋಲೀಸ್ ಹಣೆಗೆ ಬಿತ್ತು. ಅಷ್ಟೇ, ಮರು ಘಳಿಗೆಯಲ್ಲಿ ಬಾಲಕ ಜೈಲುಪಾಲಾಗಿದ್ದ. ಕಟಕಟೆಯಲ್ಲಿ ಹುಡುಗನನ್ನು ವಿಚಾರಣೆ ಮಾಡಲಾಯಿತು. ನ್ಯಾಯಾಧೀಶರಯ ನಿನ್ನ ಹೆಸರೇನು? ಎಂದು ಕೇಳಿದರೆ ಹುಡುಗ ಆಜಾದ್! ಎಂದು ಉತ್ತರಿಸಿದ. ನ್ಯಾಯಾಧೀಶರು ನಿನ್ನ ತಂದೆ ಹೆಸರೇನು? ಎಂದಾಗ ಹುಡುಗ ಸ್ವಾಧೀನತೆಯೆ ನನ್ನ ಅಪ್ಪ ಎಂದುಬಿಟ್ಟ‌. ಮನೆ ಎಲ್ಲಿ? ಎಂದು ಕೇಳಿದಾಗ ಹುಡುಗ ಸೆರೆಮನೆಯೇ ನನ್ನ  ಮನೆ! ಬರೆದುಕೊಳ್ಳಿ ಎಂದ. ನ್ಯಾಯಾಧೀಶರಿಗೆ ಹುಡುಗನ ಉತ್ತರಗಳು...

ಸ್ವಾತಂತ್ರ್ಯ_ಯಾರಿಂದ_ಬಂತು.. #ವಿನಾಯಕ_ದಾಮೋದರ_ಸಾವರ್ಕರ್ 🙏🙏

Image
#ಸ್ವಾತಂತ್ರ್ಯ_ಯಾರಿಂದ_ಬಂತು #ವಿನಾಯಕ_ದಾಮೋದರ_ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು. ವೀರ ಸಾವರ್ಕರ್ ಹಿನ್ನೆಲೆ ವಿನಾಯಕರು ಮೇ ೨೮, ೧೮೮೩ ರಲ್ಲಿ ಜನಿಸಿದರು. ಸಂಸ್ಕೃತ ವಿದ್ವಾಂಸರ ಪೀಳಿಗೆಯಲ್ಲಿ ಹುಟ್ಟಿದ ಸಾವರ್ಕರರಿಗೆ ಇತಿಹಾಸ, ರಾಜನೀತಿ, ಸಾಹಿತ್ಯ, ಭಾರತಿಯ ಸಂಸ್ಕೃತಿಗಳಲ್ಲಿ ಅತ್ಯಂತ ಆಸಕ್ತಿ. ಅವರು ಬರೆದ ಪುಸ್ತಕ “ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ - 1857” ಅಸಂಖ್ಯಾತ ಸ್ವಾತಂತ್ರ್ಯ ಯೋಧರಿಗೆ ಸ್ಪೂರ್ತಿದಾಯಕವಾಗಿತ್ತು. ದಾಮೋದರಪಂತ ಮತ್ತು ರಾಧಾಬಾಯಿಯ ನಾಲ್ಕು ಮಕ್ಕಳಲ್ಲಿ ಒಬ್ಬರಾದ ವಿನಾಯಕ ಹುಟ್ಟಿದ್ದು ಮಹಾರಾಷ್ಟ್ರದ ನಾಸಿಕ ಪಟ್ಟಣದ ಹತ್ತಿರದ ಭಾಗೂರು ಎಂಬಲ್ಲಿ. ನಾಸಿಕದ ಶಿವಾಜಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವಾಯಿತು. *ಒಂಭತ್ತನೆಯ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡು, ತಂದೆಯ ಪೋಷಣೆಯಲ್ಲಿ ಬೆಳೆದ ವಿನಾಯಕ ಬ್ರಿಟಿಷರ ವಿರುಧ್ಧದ ಸ್...